ಕನ್ನಡದ ಜನಪ್ರಿಯ ವಾಹಿನಿ ‘ಸ್ಟಾರ್ ಸುವರ್ಣ’ ಪ್ರೇಕ್ಷಕರಿಗಾಗಿ ಹೊತ್ತು ತರ್ತಿದೆ ಸಾಮಾನ್ಯ ಗೃಹಿಣಿಯ ಅಸಾಮಾನ್ಯ ಕಥೆ “ಅನುಪಮ”. ವಿಭಿನ್ನ ಕಥಾ ಹಂದರವುಳ್ಳ ನಮ್ಮಲಚ್ಚಿ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ಜೇನುಗೂಡು, ಕಥೆಯೊಂದು ಶುರುವಾಗಿದೆ ಧಾರಾವಾಹಿಗಳನ್ನು ಕನ್ನಡಿಗರಿಗೆ ನೀಡಿರುವ ಸ್ಟಾರ್ ಸುವರ್ಣ ಇದೀಗ ಇಡೀ ದೇಶದ ಹೃದಯ ಗೆದ್ದ ಗೃಹಿಣಿಯ ಕಥೆಯನ್ನು ಹೇಳಲು ಮುಂದಾಗಿದೆ.
ಮಧ್ಯ ವಯಸ್ಕ ಮಹಿಳೆ ಅನುಪಮ. ಸದಾ ಮನೆಯವರ ಬಗ್ಗೆ ಕಾಳಜಿ, ಕುಟುಂಬದವರ ಇಷ್ಟ-ಕಷ್ಟ, ಬೇಕು-ಬೇಡಗಳನ್ನು ಅರ್ಥ ಮಾಡಿಕೊಂಡು ಮನೆಯ ಗೃಹಲಕ್ಷ್ಮಿಯಂತಿರುವ ಈಕೆಗೆ ಮದುವೆಯಾಗಿ ಎರಡು ದಶಕಗಳ ಮೇಲಾಗಿದೆ. ತಾಯಿ, ಹೆಂಡತಿ. ಮಗಳು, ಸೊಸೆ ಎಲ್ಲಾ ರೀತಿಯ ಪಾತ್ರಗಳನ್ನು ನಿಭಾಯಿಸುವ ಈಕೆಗೆ 3 ಮಕ್ಕಳು, ಗಂಡನಿಗೆ ಈಕೆ ಓದಿಲ್ಲ, ಹಳೆಯ ಕಾಲದವಳು ಎಂಬ ತಾತ್ಸಾರ. ಮನೆಯಲ್ಲಿ ಏನೇ ತಪ್ಪುಗಳಾದರು ಅತ್ತೆ ದೂಷಿಸುವುದು ಈಕೆಯನ್ನೇ. ಶರವೇಗದಲ್ಲಿ ಬದಲಾಗುತ್ತಿರುವ ಕಾಲ, ಆಧುನಿಕ ಯುಗಕ್ಕೆ ಹೊಂದಿಕೊಂಡಿರುವ ಕುಟುಂಬದಲ್ಲಿ ಅನುಪಮ ಯಾವ ರೀತಿ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡು, ಸಂತೋಷ ಕಂಡುಕೊಳ್ಳುತ್ತಾಳೆ ಎಂಬುದೇ ಈ ಧಾರಾವಾಹಿಯ ಮುಖ್ಯ ಕಥಾ ಹಂದರ.
ದೇಶದ ನಂ.1 ಧಾರವಾಹಿ ಎಂಬ ಪಟ್ಟವನ್ನು ಅಲಂಕರಿಸಿರುವ “ಅನುಪಮ” ಇದೀಗ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ಕನ್ನಡದಲ್ಲಿ ಬರ್ತಿರೋದಕ್ಕೆ ಪ್ರೇಕ್ಷಕರು ಖುಷಿ ಪಡುತ್ತಿದ್ದಾರೆ. ಹೊಚ್ಚ ಹೊಸ ಧಾರಾವಾಹಿ “ಅನುಪಮ” ನಿಮ್ಮ ಮಧ್ಯಾಹ್ನದ ಮನರಂಜನೆಯಲ್ಲಿ ಇದೇ ಮಾರ್ಚ್ 6 ರಿಂದ ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.
ಬದಲಾದ ಸಮಯದಲ್ಲಿ ಬರ್ತಿದೆ “ಅನುರಾಗ ಅರಳಿತು” ಮಾರ್ಚ್ 6 ರಿಂದ ಮಧ್ಯಾಹ್ನ 2 ಗಂಟೆಗೆ.
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…