ಉದಯ ಟಿವಿ ಹೊಸ ಥರದ ಕಥೆಗಳ ಮೂಲಕ ಪುಟಾಣಿಗಳಿಂದ ವಯೋವೃದ್ಧರವರೆಗೆ ಜನಮನ ಗೆಲ್ಲುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಸಹಜತೆ, ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡುತ್ತಿವೆ. ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ, ಗೌರಿಪುರದ ಗಯ್ಯಾಳಿಗಳು ಇತ್ಯಾದಿ ಕೌಟುಂಬಿಕ ಧಾರವಾಹಿಗಳಿಂದ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ ಈಗ ವಿನೂತನ ಶೈಲಿಯ ಅದ್ಭುತ ನಿರೂಪಣೆಯ ಅದ್ದೂರಿ ʻಶಾಂಭವಿʼ ಎಂಬ ಹೊಸ ಕಥಾನಕವನ್ನು ನಿಮ್ಮ ಮುಂದೆ ತರಲು ಸಜ್ಜಾಗುತ್ತಿದೆ. ʻಸಿಂಪಲ್ ಆಗಿ ಒಂದು ಲವ್ ಸ್ಟೋರಿʼ ಖ್ಯಾತಿಯ ಸಿಂಪಲ್ ಸುನಿ ಮೊಟ್ಟಮೊದಲ ಬಾರಿಗೆ ಟಿವಿ ಧಾರಾವಾಹಿ ನಿರ್ಮಿಸಿ ನಿರ್ದೇಶಿಸುತ್ತಿದ್ದಾರೆ ಎನ್ನುವುದು ವಿಶೇಷ.
ಶಾಂಭವಿ ಮುದ್ದಾದ ಆರು ವರ್ಷದ ಮಗು. ಇವಳ ಅಮ್ಮ ಶಿವಗಾಮಿ ಸಾವಿರಾರು ಕೋಟಿ ಆಸ್ತಿಯ ಒಡತಿ. ಶ್ರೀ ಶಾಂಭವಿ ಶಿಕ್ಷಣ ಸಂಸ್ಥೆ ಜೊತೆ ಇನ್ನೂ ಹಲವು ಉದ್ಯಮಗಳಿವೆ. ಇವಳಿಗೊಬ್ಬ ಅಣ್ಣ ಹರಿಪ್ರಸಾದ್. ಅಣ್ಣತಂಗಿಗೆ ಅವರಿಬ್ಬರೇ ಪ್ರಪಂಚ. ನಾಯಕ ಅಶೋಕ ಅವರ ಸಂಸ್ಥೆಯಲ್ಲಿ ಶಿಕ್ಷಕನಾಗಿ ಸೇರುವುದರೊಂದಿಗೆ ಕಥೆ ತಿರುವು ಪಡೆದುಕೊಳ್ಳುತ್ತದೆ. ಅಶೋಕನ ಮನೆಯವರು ದುಡ್ಡಿಗಾಗಿ ಹಪಹಪಿಸುವ ಮಂದಿ. ಅವನ ಅಮ್ಮ ಮತ್ತು ತಮ್ಮಂದಿರು ತುಂಬಾ ಖತರ್ನಾಕ್. ಎಂತೆಂಥ ಸಂಬಂಧ ಬಂದರೂ ಮದುವೆಗೆ ಒಪ್ಪದಿದ್ದ ಶಿವಗಾಮಿ ಮಧ್ಯಮ ವರ್ಗದ ಅಶೋಕ್ ಪ್ರೀತಿಯಲ್ಲಿ ಬೀಳುತ್ತಾಳೆ. ಅವನ ಹಿಂದಿನ ಷಡ್ಯಂತ್ರದ ಬಲೆಯಲ್ಲಿ ಸಿಲುಕಿಕೊಳ್ಳುತ್ತಾಳೆ.
ಮದುವೆಯೂ ಆಗುತ್ತದೆ. ಅವರಿಗೆ ಹುಟ್ಟಿದ ಮಗುವೇ ಶಾಂಭವಿ. ಮುಂದೆ ಒಂದು ದಿನ ಶಾಂಭವಿ ಕಾಣೆಯಾಗುತ್ತಾಳೆ. ಶಿವಗಾಮಿ ಹುಚ್ಚಿಯಾಗುತ್ತಾಳೆ. ಅದೇ ಸಮಯಕ್ಕೆ ಒಂದು ದೇವಿಯ ಪ್ರತಿಷ್ಠಾಪೆ ಆಗುತ್ತದೆ. ಕಾಣೆಯಾದ ಶಾಂಭವಿಗೂ ಈ ದೇವಿ ಇರುವ ಜಾಗಕ್ಕೂ ಸಂಬಂಧವಿದೆ. ಒಂದು ದಿನ ಶಾಂಭವಿ ಇನ್ನು ಮರಳಿ ಬರುವುದಿಲ್ಲ ಎಂದೇ ನಂಬಿದ್ದ ದುಷ್ಟಪಡೆಗೆ ಚಳ್ಳೆಹಣ್ಣು ತಿನ್ನಿಸಲು ಪುಟ್ಟ ಶಾಂಭವಿ ಮರಳಿ ಬರುತ್ತಾಳೆ. ಅವರ ಪಾಲಿಗೆ ಕಾಡುವ ದೆವ್ವವಾಗಿ, ಒಳ್ಳೆಯವರ ಪಾಲಿಗೆ ದೇವತೆಯಾಗಿ!
ಸುನಿ ಸಿನಿಮಾಸ್ ಸಂಸ್ಥೆಯ ಅಡಿಯಲ್ಲಿ ʻಶಾಂಭವಿʼ ನಿರ್ಮಾಣವಾಗುತ್ತಿದೆ. YBR ಮನು ಛಾಯಾಗ್ರಹಣ, ಪರಂ ಅವರ ಸಂಕಲನವಿದೆ,ಜಗದೀಶ್ ದೊಡ್ಡೇರಿ ಸಹ-ನಿರ್ದೇಶನ ಪುಗಳ್ಮಣಿ ಅವರ ಕಥೆ ಚಿತ್ರಕಥೆ, ರಾಧಾ ವೆಂಕಟ್ರವರ ಸಂಭಾಷಣೆಯಿದೆ.ಶಿವಕುಮಾರ್ ಕ್ಯಾಶಿಯರ್, ಕವಿ ಡಾ.ನಾಗೇಂದ್ರ ಪ್ರಸಾದ್ ಸಂಗೀತ ಮತ್ತು ಸಾಹಿತ್ಯದ ಜವಾಬ್ದಾರಿ ಹೊತ್ತಿದ್ದಾರೆ.ಅಶೋಕ್ ನಿರ್ಮಾಣ-ನೀರ್ವಹಣೆ ಮತ್ತು ಚಂದ್ರಹಾಸ್ಎವರು ಪ್ರೋಡಕ್ಷನ್ ಕಂಟ್ರೋಲ್ ಮಾಡಿತ್ತಿದ್ದಾರೆ.
ಶಾಂಭವಿಯ ಪಾತ್ರವನ್ನು ಬೇಬಿ ರಚನಾ ಟಿ.ಬಿ ನೀರ್ವಹಿಸುತ್ತಿದ್ದಾರೆ; ಪ್ರಮುಖ ಪಾತ್ರದಲ್ಲಿ ಐಶ್ವರ್ಯ ಸಿಂಧೋಗಿ, ಹರೀಶ್ ಟಿವಿ, ವಿನಯ ಗೌಡ, ಅಂಬುಜಾಕ್ಷಿ ನಟಿಸಿದರೆ ಪೂಜಿತಾ, ಡಾಲಿ ರಾಜೇಶ್, ಸೂರ್ಯ ಕುಂದಾಪುರ, ರೋಹಿತ್ ನಾಯರ್ ,ಶ್ಯಾಮಲಮ್ಮ ಮುಂತಾದವರ ಸಹತಾರಾಗಣವಿದೆ.
ಪುಟ್ಟ ಹುಡುಗಿಯಾಗಿ ಬಂದು ದೆವ್ವವಾಗಿ ದುಷ್ಟರನ್ನು ಶಿಕ್ಷಿಸುವ, ದೇವತೆಯಾಗಿ ಶಿಷ್ಟರನ್ನು ರಕ್ಷಿಸುವ ʻಶಾಂಭವಿʻ ಧಾರಾವಾಹಿ ಸೆಪ್ಟೆಂಬರ್ ೧೧ರಿಂದ, ಸೋಮವಾರದಿಂದ ಶನಿವಾರದವರಗೆ ರಾತ್ರಿ ೭.೩೦ ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
This website uses cookies.
Read More