ಇತ್ತೀಚೆಗಷ್ಟೇ ಸ್ಟಾರ್ ಸುವರ್ಣ ಪರಿವಾರಕ್ಕೆ ಸೇರ್ಪಡೆಯಾಗಿರುವ “ಆಸೆ” ಧಾರಾವಾಹಿಯು ತನ್ನ ವಿನೂತನ ಕಥಾ ಹಂದರದಿಂದ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೊಂದು ಸಾಮಾನ್ಯ ಜನರ ಅಸಮಾನ್ಯ ಕಥೆ. ಚಂದನವನದ ಖ್ಯಾತ ನಟ ರಮೇಶ್ ಅರವಿಂದ್ ರವರು ತುಂಬಾ ಇಷ್ಟ ಪಡುತ್ತಿರುವ ಕಥೆ ಇದಾಗಿದೆ.
ಸಾಮಾನ್ಯವಾಗಿ ಬಡಕುಟುಂಬದಲ್ಲಿ ನಡೆಯುವಂತಹ ಕಷ್ಟ, ನೋವು, ಸಂಕಟ, ಆಸೆ ಎಲ್ಲವನ್ನು ಮನಮುಟ್ಟುವಂತೆ ಈ ಧಾರಾವಾಹಿಯಲ್ಲಿ ಹೇಳಲಾಗಿದೆ. ಸುಂದರ ತಾರಾ ಬಳಗವನ್ನು ಹೊಂದಿರುವ ಈ ಸೀರಿಯಲ್ ನಲ್ಲಿ ಕಲಾವಿದರಂತೂ ಅತ್ಯದ್ಭುತವಾಗಿ ನಟಿಸುತ್ತಿದ್ದಾರೆ. ಪ್ರತಿಯೊಂದು ಪಾತ್ರವು ಅದರದ್ದೇ ಆದ ತೂಕ ಹೊಂದಿದೆ. ತಂದೆ ಪಾತ್ರದಲ್ಲಿ ನಟ ಮಂಡ್ಯ ರಮೇಶ್ ಕಾಣಿಸಿಕೊಂಡಿದ್ದಾರೆ.
ಸೂರ್ಯ-ಮೀನಾರ ಕೋಳಿ ಜಗಳ ನೋಡೋದೇ ಸಿಕ್ಕಾಪಟ್ಟೆ ಮಜಾ. ಮೇಕಿಂಗ್ ವಿಚಾರದಲ್ಲಿ ಸಿನಿಮಾವನ್ನು ಮೀರಿಸುತ್ತೆ ಆಸೆ ಸೀರಿಯಲ್ ನ ಮೇಕಿಂಗ್, ಈಗಾಗಲೇ ಧಾರಾವಾಹಿಯ ಶೀರ್ಷಿಕೆ ಗೀತೆಯಂತೂ ನೋಡುಗರ ಮನಗೆದ್ದು ಪ್ರಶಂಸೆಗೆ ಪಾತ್ರವಾಗಿದೆ.ಇದೀಗ ಕಥಾ ನಾಯಕಿ ಮೀನಾಳ ಮದುವೆ ತಯಾರಿ ನಡಿಯುತ್ತಿದೆ. ತಪ್ಪದೇ ವೀಕ್ಷಿಸಿ “ಆಸೆ” ಧಾರಾವಾಹಿಯ ರಸಭರಿತ ಸಂಚಿಕೆಗಳು ಸೋಮ-ಶನಿ ರಾತ್ರಿ 7.30ಕ್ಕೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.
“ಆಸೆ” ನನ್ನ ಮನಸಿಗೆ ತುಂಬಾ ಇಷ್ಟವಾಗಿರೋ ಧಾರಾವಾಹಿ, ಯಾಕಂದ್ರೆ ಸಾಮಾನ್ಯ ಜನರ ಅಸಮಾನ್ಯ ಕಥೆಯಂತಿರೋ ಈ ಸೀರಿಯಲ್ ನಂಗೆ ನ್ಯಾಚುರಲ್ ಫೀಲ್ ಕೊಡ್ತಿದೆ, ಪ್ರತಿಯೊಬ್ಬರ ಮನೆಯಲ್ಲಿ ನಡೆಯುವ ಸಣ್ಣ ಪುಟ್ಟ ವಿಚಾರವನ್ನು ಈ ಕಥೆಯಲ್ಲಿ ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಹೀಗಾಗಿ ‘ಆಸೆ’ ಸೀರಿಯಲ್ ನಂಗೆ ತುಂಬಾ ಅಚ್ಚು ಮೆಚ್ಚು , ನಟ ರಮೇಶ್ ಅರವಿಂದ್
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
This website uses cookies.
Read More