ಜೀ ಕನ್ನಡದ ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ನಲ್ಲಿ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಭಾಗವಹಿಸಿದ್ದಾರೆ. ಸ್ವತಃ ಅದ್ಭುತ ನೃತ್ಯಕ್ಕೆ ಹೆಸರಾದ ಅಪ್ಪು ಉಪಸ್ಥಿತಿ ಎಲ್ಲ ನೃತ್ಯಪಟುಗಳ ಉತ್ಸಾಹ ಹೆಚ್ಚಿಸಿದೆ. ಪುನೀತ್ ಕೂಡಾ ಸ್ಪರ್ಧಿಗಳೊಂದಿಗೆ ಸ್ವತಃ ಕುಣಿದು ಅವರೊಂದಿಗೆ ತಾವೂ ಒಬ್ಬರಾದರು.
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಗಳೆಲ್ಲರಲ್ಲೂ ಪುನೀತ್ ಉಪಸ್ಥಿತಿ ಸಂಚಲನ ಉಂಟು ಮಾಡಿತು. ಈಗಾಗಲೇ ತಮ್ಮ ಪ್ರತಿಭೆಯಿಂದ ಕರ್ನಾಟಕದ ಮನೆ ಮನೆಯ ವೀಕ್ಷಕರನ್ನು ಸೆಳೆದ `ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಸ್ಪರ್ಧಿಗಳಿಗೆ ಉತ್ತೇಜನ ನೀಡಿದ್ದಲ್ಲದೆ ಈ ಕಾರ್ಯಕ್ರಮ ತಮ್ಮ ಅಚ್ಚುಮೆಚ್ಚಿನ ಕಾರ್ಯಕ್ರಮಗಳಲ್ಲಿ ಒಂದು ಎಂದರು.
ಜೀ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಕಳೆದ ಹತ್ತು ವರ್ಷಗಳಿಂದ ಕರ್ನಾಟಕದ ಜನತೆಗೆ ರಂಜಿಸುತ್ತಿದೆ. ಪ್ರತಿ ಸೀಸನ್ ಮುಗಿಯುತ್ತಿದ್ದಂತೆ ಮುಂದಿನ ಸೀಸನ್ ಗೆ ಕಾಯುವಂತೆ ಮಾಡುವ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಈ ಬಾರಿ ಮತ್ತಷ್ಟು ವಿಶೇಷತೆಗಳನ್ನು ಮೈಗೂಡಿಸಿಕೊಂಡಿದೆ.
ತಮ್ಮ ಸಲಹೆ, ಮಾರ್ಗದರ್ಶನದಿಂದ ನೃತ್ಯಗಾರರಿಗೆ ಸ್ಫೂರ್ತಿ ತುಂಬುವ ಖ್ಯಾತ ನಟ ವಿಜಯ್ ರಾಘವೇಂದ್ರ, ಖ್ಯಾತ ನಟಿ ರಕ್ಷಿತಾ ಪ್ರೇಮ್ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರು ಪುನೀತ್ ಅವರೊಂದಿಗೆ ರಂಜನೆಗೆ ತಮ್ಮ ಬದುಕಿನ ಅಪರೂಪದ ಕ್ಷಣಗಳನ್ನು ಬೆರೆಸಿದರು.
ನಿರೂಪಕಿ ಅನುಶ್ರೀ ಎಂದಿನಂತೆ ತಮ್ಮ ವಿಶಿಷ್ಟ ಮಾತುಗಾರಿಕೆ, ಶೈಲಿಯಿಂದ ಗಮನ ಸೆಳೆದರು.
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…