ಜೀ ಕನ್ನಡ ಚಾನೆಲ್

ಪುನೀತ್ ರಾಜ್ ಕುಮಾರ್ – ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್

ಜಾಹೀರಾತುಗಳು

ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಯುವರತ್ನ ಪುನೀತ್ ರಾಜ್ ಕುಮಾರ್

Puneeth Rajkumar on DKD
Puneeth Rajkumar on DKD

ಜೀ ಕನ್ನಡದ ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ನಲ್ಲಿ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಭಾಗವಹಿಸಿದ್ದಾರೆ. ಸ್ವತಃ ಅದ್ಭುತ ನೃತ್ಯಕ್ಕೆ ಹೆಸರಾದ ಅ‍ಪ್ಪು ಉಪಸ್ಥಿತಿ ಎಲ್ಲ ನೃತ್ಯಪಟುಗಳ ಉತ್ಸಾಹ ಹೆಚ್ಚಿಸಿದೆ. ಪುನೀತ್ ಕೂಡಾ ಸ್ಪರ್ಧಿಗಳೊಂದಿಗೆ ಸ್ವತಃ ಕುಣಿದು ಅವರೊಂದಿಗೆ ತಾವೂ ಒಬ್ಬರಾದರು.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಗಳೆಲ್ಲರಲ್ಲೂ ಪುನೀತ್ ಉಪಸ್ಥಿತಿ ಸಂಚಲನ ಉಂಟು ಮಾಡಿತು. ಈಗಾಗಲೇ ತಮ್ಮ ಪ್ರತಿಭೆಯಿಂದ ಕರ್ನಾಟಕದ ಮನೆ ಮನೆಯ ವೀಕ್ಷಕರನ್ನು ಸೆಳೆದ `ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಸ್ಪರ್ಧಿಗಳಿಗೆ ಉತ್ತೇಜನ ನೀಡಿದ್ದಲ್ಲದೆ ಈ ಕಾರ್ಯಕ್ರಮ ತಮ್ಮ ಅಚ್ಚುಮೆಚ್ಚಿನ ಕಾರ್ಯಕ್ರಮಗಳಲ್ಲಿ ಒಂದು ಎಂದರು.

ಜೀ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಕಳೆದ ಹತ್ತು ವರ್ಷಗಳಿಂದ ಕರ್ನಾಟಕದ ಜನತೆಗೆ ರಂಜಿಸುತ್ತಿದೆ. ಪ್ರತಿ ಸೀಸನ್ ಮುಗಿಯುತ್ತಿದ್ದಂತೆ ಮುಂದಿನ ಸೀಸನ್ ಗೆ ಕಾಯುವಂತೆ ಮಾಡುವ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಈ ಬಾರಿ ಮತ್ತಷ್ಟು ವಿಶೇಷತೆಗಳನ್ನು ಮೈಗೂಡಿಸಿಕೊಂಡಿದೆ.

ಜಾಹೀರಾತುಗಳು

ತಮ್ಮ ಸಲಹೆ, ಮಾರ್ಗದರ್ಶನದಿಂದ ನೃತ್ಯಗಾರರಿಗೆ ಸ್ಫೂರ್ತಿ ತುಂಬುವ ಖ್ಯಾತ ನಟ ವಿಜಯ್ ರಾಘವೇಂದ್ರ, ಖ್ಯಾತ ನಟಿ ರಕ್ಷಿತಾ ಪ್ರೇಮ್ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರು ಪುನೀತ್ ಅವರೊಂದಿಗೆ ರಂಜನೆಗೆ ತಮ್ಮ ಬದುಕಿನ ಅಪರೂಪದ ಕ್ಷಣಗಳನ್ನು ಬೆರೆಸಿದರು.

ನಿರೂಪಕಿ ಅನುಶ್ರೀ ಎಂದಿನಂತೆ ತಮ್ಮ ವಿಶಿಷ್ಟ ಮಾತುಗಾರಿಕೆ, ಶೈಲಿಯಿಂದ ಗಮನ ಸೆಳೆದರು.

Recent Posts

ಸುವರ್ಣ ಗೃಹಮಂತ್ರಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ

ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…

3 days ago

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

2 weeks ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

2 weeks ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

3 weeks ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

3 weeks ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

4 weeks ago