ಸ್ಟಾರ್ ಸುವರ್ಣ

ಅವನು ಮತ್ತೆ ಶ್ರಾವಣಿ, ಶುರುವಾಗ್ತಿದೆ ಹೊಚ್ಚ ಹೊಸ ಭಾವನಾತ್ಮಕ ಪ್ರೀತಿ ಕಥೆ ಇದೇ ಅಕ್ಟೋಬರ್ 2 ರಿಂದ ರಾತ್ರಿ 10 ಗಂಟೆಗೆ !

ಜಾಹೀರಾತುಗಳು

ಸ್ಟಾರ್ ಸುವರ್ಣ – ಅವನು ಮತ್ತೆ ಶ್ರಾವಣಿ

ಸ್ಟಾರ್ ಸುವರ್ಣ - ಅವನು ಮತ್ತೆ ಶ್ರಾವಣಿ
Avanu Mathe Shravani Serial Star Suvarna

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಅವನು ಮತ್ತೆ ಶ್ರಾವಣಿ’ ಧಾರಾವಾಹಿ 900 ಕ್ಕೂ ಹೆಚ್ಚು ಯಶಸ್ವಿ ಸಂಚಿಕೆಗಳೊಂದಿಗೆ ಪ್ರೇಕ್ಷಕರ ಮನಗೆದ್ದು ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಇದೀಗ ಅದೇ ಹೆಸರಿನಲ್ಲಿ ಹೊಸದೊಂದು ಲವ್ ಸ್ಟೋರಿಯನ್ನು ಪ್ರಸಾರ ಮಾಡಲು ಸ್ಟಾರ್ ಸುವರ್ಣ ಸಜ್ಜಾಗಿದೆ.

ಅವನು ಮತ್ತೆ ಶ್ರಾವಣಿ

ಬದುಕಿನಲ್ಲಿ ನಡೆದಿದ್ದ ಕಹಿ ಘಟನೆಗಳಿಂದಾಗಿ ಕಥಾನಾಯಕಿ ಶ್ರಾವಣಿ ವಿದೇಶದಲ್ಲಿ ವಾಸವಾಗಿರ್ತಾಳೆ. 4 ವರ್ಷಗಳ ಬಳಿಕ ಶ್ರಾವಣಿ ತನ್ನ ದೊಡ್ಡಪ್ಪನ ಮಗಳ ಮದುವೆಯ ಸಲುವಾಗಿ ವಿದೇಶದಿಂದ ಭಾರತಕ್ಕೆ ಬರುತ್ತಾಳೆ. ತಾನು ಪ್ರೀತಿಸಿ ಮದುವೆಯಾಗಿ ವಿಚ್ಚೇಧನ ಪಡೆದ ಅಭಿಮನ್ಯು , ತನ್ನ ತಂಗಿಯನ್ನು ಮದುವೆಯಾಗಲಿರುವ ಹುಡುಗ ಎಂಬ ಸತ್ಯ ಶ್ರಾವಣಿಗೆ ತಿಳಿಯುತ್ತದೆ.

ಜಾಹೀರಾತುಗಳು

ವರ್ಷಗಳ ಬಳಿಕ ಇವರಿಬ್ಬರು ಮುಖ ಮುಖಿಯಾಗ್ತಾರೆ. ಇನ್ನು ಈ ಕತೆಯಲ್ಲಿ ಇನ್ನೊಂದು ಮುಖ್ಯಪಾತ್ರ ನಿರ್ವಹಿಸುತ್ತಿರುವುದು ‘ಚೀಕು’ ಎಂಬ ನಾಯಿ. ಮಗುವಿನಂತಿರುವ ಈ ನಾಯಿ ಅಭಿಮನ್ಯು ಹಾಗು ಶ್ರಾವಣಿಯನ್ನು ಮತ್ತೆ ಹೇಗೆ ಒಂದು ಮಾಡುತ್ತದೆ ? ಈ ಪ್ರೇಮಿಗಳಿಬ್ಬರು ದೂರವಾಗಲು ಕಾರಣವಾದರು ಏನು ? ಈ ಎರಡಕ್ಷರದ ಪ್ರೀತಿಗೆ..ಸಿಗಲಿದೆಯೇ ಎರಡನೇ ಅವಕಾಶ ? ಅನ್ನೋದೇ “ಅವನು ಮತ್ತೆ ಶ್ರಾವಣಿ” ಧಾರಾವಾಹಿಯ ಮುಖ್ಯ ಕಥಾ ಹಂದರ.

Avanu Mathe Shravani

ಸ್ಟಾರ್ ಸುವರ್ಣ

ಇನ್ನು ಈ ಧಾರಾವಾಹಿಯು ಅದ್ಬುತ ತಾರಾಬಳಗವನ್ನು ಹೊಂದಿದ್ದು, ನಾಯಕನ ಪಾತ್ರದಲ್ಲಿ ಸ್ಕಂದ ಅಶೋಕ್, ನಾಯಕಿಯಾಗಿ ಅನುಷಾ ರಮೇಶ್ ಅಭಿನಯಿಸುತ್ತಿದ್ದಾರೆ. ಹದಿನೈದು ವರ್ಷಗಳಿಂದ ಹೊಸತನಕ್ಕೆ ಮೊದಲ ಆಧ್ಯತೆ ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶುರುವಾಗ್ತಿದೆ ಭಾವನಾತ್ಮಕ ಪ್ರೀತಿಕತೆ “ಅವನು ಮತ್ತೆ ಶ್ರಾವಣಿ” ಇದೇ ಅಕ್ಟೋಬರ್ 2 ರಿಂದ ರಾತ್ರಿ 10 ಗಂಟೆಗೆ ತಪ್ಪದೇ ವೀಕ್ಷಿಸಿ.

Recent Posts

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

1 day ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

6 days ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

6 days ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

2 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

3 weeks ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

4 weeks ago