ವಿಭಿನ್ನ , ವಿಶೇಷ ಮನರಂಜನಾ ಪ್ರಯೋಗಗಳಿಗೆ ಸದಾ ಮುಂಚೂಣಿಯಲ್ಲಿರುವ ಕನ್ನಡದ ನಂಬರ್ 1 ವಾಹಿನಿ ಜೀ ಕನ್ನಡ ಹೆಮ್ಮೆಯಿಂದ ಅರ್ಪಿಸಿದ ಧಾರಾವಾಹಿ ಭೂಮಿಗೆ ಬಂದ ಭಗವಂತ . ಸೋಮವಾರದಿಂದ ಶುಕ್ರವಾರ ರಾತ್ರಿ 10 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿ ಮಧ್ಯಮ ವರ್ಗದ ಜನರ ಬದುಕಿನ ಕಥೆಗಳನ್ನು ಹೇಳುತ್ತಲೇ ಜೀವನದ ಮೌಲ್ಯಗಳನ್ನು ಭಗವಂತನ ಮೂಲಕ ನೋಡುಗರಿಗೆ ತಿಳಿಸುತ್ತ ಕಿರುತೆರೆ ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ .
ಸಾರ್ಥಕ 200 ಸಂಚಿಕೆಗಳನ್ನು ಪೂರೈಸುತ್ತಿರುವ ಈ ಧಾರಾವಾಹಿಯ ನಿರ್ಮಾಣದ ಜವಾಬ್ದಾರಿಯನ್ನು ತಾಂಡವ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆ ಹೊತ್ತಿದ್ದರೆ ಆರೂರು ಜಗದೀಶ್ ಪ್ರಧಾನ ನಿರ್ದೇಶಕರಾಗಿದ್ದಾರೆ ಮತ್ತು ಕುಮಾರ್ ಕೆರಗೋಡು ಸಂಚಿಕೆ ನಿರ್ದೇಶಕರಾಗಿದ್ದಾರೆ .
ಇನ್ನು ನಟ , ನಿರ್ದೇಶಕ ನವೀನ್ ಕೃಷ್ಣ , ನಟಿ ಕೃತ್ತಿಕಾ ರವೀಂದ್ರ , ಹಿರಿಯ ನಟರಾದ ಉಮೇಶ್ ಎಂ ಎಸ್ , ಭಗವಂತನ ಪಾತ್ರಧಾರಿಯಾಗಿ ಕಾರ್ತಿಕ್ ಸಾಮಗ , ಅಂಕಿತಾ ಜಯರಾಮ್ , ಅನುರಾಗ್ , ಶೋಧನ್ ಬಸ್ರೂರ್ , ಅಶ್ವಿನಿ ಸೇರಿದಂತೆ ಬಹುತಾರಾಗಣ ಈ ಧಾರಾವಾಹಿಯಲ್ಲಿದೆ.
ಮತ್ತೊಂದು ವಿಶೇಷವೆಂದರೆ , ಇದು ಮಕ್ಕಳಿಂದ ವಯೋವೃದ್ಧರವರೆಗೂ ತಲುಪಿದ್ದು ಧಾರಾವಾಹಿಗೆ ಮತ್ತು ತಂಡಕ್ಕೆ ಹೆಮ್ಮೆಯ ಸಂಗತಿ ಎನ್ನುತ್ತದೆ ವಾಹಿನಿ.
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…