ಸ್ಟಾರ್ ಸುವರ್ಣದ ‘ಬೊಂಬಾಟ್ ಭೋಜನ’ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ ಅಡುಗೆ ಶೋ “ಬೊಂಬಾಟ್ ಭೋಜನ”ದಲ್ಲಿ ಈ ಬಾರಿ “ರಾಮನವಮಿ’ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಲಾಗುತ್ತಿದೆ.
ಈ ರಾಮನವಮಿಯ ವಿಶೇಷ ಸಂಚಿಕೆಯನ್ನು ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ರವರ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ. ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ರವರ ತುಂಬು ಕುಟುಂಬವನ್ನು ನೀವು ಈ ವಿಶೇಷ ಸಂಚಿಕೆಯಲ್ಲಿ ಕಾಣಬಹುದು. ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ವಿಶೇಷ ಸಂಚಿಕೆಯಲ್ಲಿ ಎಳೆಎಳೆಯಾಗಿ ಹೇಳಿದ್ದಾರೆ.
ಸ್ಟಾರ್ ಸುವರ್ಣ
ಬೊಂಬಾಟ್ ಭೋಜನದ ರೂವಾರಿಯಾಗಿರುವ ಸಿಹಿ ಕಹಿ ಚಂದ್ರು ರವರು ಅರುಣ್ ಯೋಗಿರಾಜ್ ರವರಿಗೆ ಗೌರವಾರ್ಪಣೆಯೊಂದಿಗೆ, ಸನ್ಮಾನಿಸಿದ್ದಾರೆ. ಜೊತೆಗೆ ಈ ವಿಶೇಷ ಸಂಚಿಕೆಯಲ್ಲಿ ಗಾಯಕರಾದ ಶ್ರೀ ಚಿನ್ಮಯಿ ಅತ್ರೇಯಸ್ ರವರು ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿ ಮನರಂಜಿಸಿದ್ದಾರೆ.
ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ(17/4/2024) ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.