ಸ್ಟಾರ್ ಸುವರ್ಣ

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಜಾಹೀರಾತುಗಳು
Bombat Bojana Ugadi Special
Bombat Bojana Ugadi Special

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ “ಬೊಂಬಾಟ್ ಭೋಜನ”ದಲ್ಲಿ ಇದೀಗ ನವ ಸಂವತ್ಸರದ ಮೊದಲ ಹಬ್ಬ ‘ಯುಗಾದಿ’ಯ ಸಂಭ್ರಮಾಚರಣೆ ಬೊಂಬಾಟ್ ಆಗಿ ನಡೆಯುತ್ತಿದೆ.

ಸಿಹಿ ಕಹಿ ಚಂದ್ರು ರವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಶೋ, ಮನೆ ಮಂದಿಗೆ ರುಚಿಕರವಾದ ಅಡುಗೆಯನ್ನು ಮಾಡಿ ಬಡಿಸುವಲ್ಲಿ ವೀಕ್ಷಕರಿಗೆ ಸಹಾಯಕವಾಗಿದೆ. ಪ್ರಸ್ತುತ 4 ನೇ ಆವೃತ್ತಿಯೊಂದಿಗೆ ಮುಂದುವರಿಯುತ್ತಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮದಲ್ಲಿ ಈ ಬಾರಿ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು ವಾರವಿಡೀ ಸ್ಯಾಂಡಲ್ ವುಡ್ ತಾರೆಗಳು ಆಗಮಿಸಲಿದ್ದಾರೆ.

ಬೇವು ಬೆಲ್ಲದ ಸವಿ ಹಂಚಲು ಇದೇ ಏಪ್ರಿಲ್ 8 ರಂದು ಸೋಮವಾರ ನಟ ಸತೀಶ್ ನೀನಾಸಂ, ಮಂಗಳವಾರ ನಟಿ ನಿಶ್ವಿಕಾ ನಾಯ್ಡು ಹಾಗು ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಬುಧವಾರ ನಟ ದಿಗಂತ್, ಗುರುವಾರ ಶಿವರಾಜ್ ಕೆ ಆರ್ ಪೇಟೆ, ಶುಕ್ರವಾರ ಕಿರುತೆರೆ ನಟ ಕಿರಣ್ ರಾಜ್ ಹಾಗು ಶನಿವಾರ ‘ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು’ ಸಿನಿಮಾ ಖ್ಯಾತಿಯ ದಡ್ಡ ಪ್ರವೀಣ ಆಗಮಿಸುತ್ತಿದ್ದಾರೆ. ಹೀಗಾಗಿ ವಾರಪೂರ್ತಿ ಮಧ್ಯಾಹ್ನ ವೀಕ್ಷಕರಿಗೆ ಬೊಂಬಾಟ್ ಮನರಂಜನೆ ಸಿಗಲಿದೆ.

ಜಾಹೀರಾತುಗಳು

ಯುಗಾದಿಯ ಪ್ರಯುಕ್ತ ‘ಬೊಂಬಾಟ್ ಭೋಜನ’ದಲ್ಲಿ ಬರ್ತಿದೆ ಹಬ್ಬದ ವಿಶೇಷ ಸಂಚಿಕೆಗಳು ಏಪ್ರಿಲ್ 8 ರಿಂದ ಏಪ್ರಿಲ್ 14 ರವರೆಗೆ ಸೋಮ-ಶನಿವಾರ ಮಧ್ಯಾಹ್ನ12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

Recent Posts

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

2 days ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

7 days ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

7 days ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

2 weeks ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

4 weeks ago

ಶ್ರೀ ಬ್ರಾಹ್ಮೀ ಹೊಸ ಕಥೆಯ ಶ್ರಾವಣಿ ಸುಬ್ರಮಣ್ಯ ಜೀ಼ ಕನ್ನಡದಲ್ಲಿ ಶುಭಾರಂಭ ಮಾರ್ಚ್‌ 18ರಿಂದ ಮಹಾಮನೋರಂಜನೆಗೆ ಮುನ್ನುಡಿ

ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್‌ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…

1 month ago