ಉದಯ ಟಿವಿಯಲ್ಲಿ ಶುರುವಾಗ್ತಿದೆ ಮನರಂಜನೆಯ ಮಹಾ ಧಮಾಕ. ಬೆಚ್ಚಗಿನ ಇಳಿಜಾರಿನಿಂದ ತಂಪಾದ ರಾತ್ರಿಯವರೆಗೆ ನಿಮ್ಮ ಸಂಜೆಗಳ ಸಂಗಾತಿಯಾಗಿರೊ ಉದಯ ಟಿವಿ ಇನ್ನು ಮುಂದೆ ಮಧ್ಯಾಹ್ನಗಳಿಗೆ ಮನರಂಜನೆಯ ಸಿಂಚನ ನೀಡೋಕೆ ಸಿದ್ಧವಾಗಿದೆ. ಮಧ್ಯಾಹ್ನದ ಮಹಾಕಥೆಗಳ ಶೀರ್ಷಿಕೆಯೊಂದಿಗೆ ಧಾರಾವಾಹಿಗಳು ವೀಕ್ಷಕರ ಮುಂದೆ ಹೊತ್ತು ತರುತ್ತಿದೆ ಉದಯ ಟಿವಿ. ಭಕ್ತಿ-ಶಕ್ತಿ, ಪ್ರೀತಿ-ನೀತಿ, ಭಯ-ಧೈರ್ಯಗಳ ಸಮಮಿಶ್ರಣದ ಹೂರಣವೇ ಈ ಮಧ್ಯಾಹ್ನದ ಮಹಾಕಥೆಗಳಲ್ಲಿ ತುಂಬಿದೆ ಅಂದ್ರೆ ತಪ್ಪಾಗಲಾರದು.
ಪ್ರಕೃತಿಯ ಮೊದಲ ಶಕ್ತಿಯ ಜೊತೆ ಭಕ್ತಿಯ ಪರಾಕಾಷ್ಠೆಯ ಎರಡು ಹೊಸ ಕಥೆಗಳು ಉದಯ ವಾಹಿನಿಯ ಧಾರಾವಾಹಿಗಳ ಗುಚ್ಛ ಸೇರುತ್ತಿವೆ. ಮಧ್ಯಾಹ್ನ ೧೨ಕ್ಕೆ ಶಕ್ತಿರೂಪಿಣಿ ಜಗ್ನಮಾತೆಯ ಪುರಾಣ “ದೇವಿ ಆದಿಪರಾಶಕ್ತಿ”, ೧೨.೩೦ಕ್ಕೆ ಶ್ರೀಕೃಷ್ಣನ ಸಾರಥ್ಯದಲ್ಲಿ ಹೇಳಿದ ರಾಮನ ಭಕ್ತ ಹನುಮಂತನ ಕಥಾಸಾರ “ಜೈ ಭಜರಂಗಿ” ಧಾರಾವಾಹಿಗಳು ಕನ್ನಡದಲ್ಲಿ ಮಧ್ಯಾಹ್ನಕ್ಕೆ ಮುದ ನೀಡಲಿವೆ.
ಈ ಧಾರಾವಾಹಿಗಳು ಇದೇ ಸೆಪ್ಟೆಂಬರ್ ೨೧ರಿಂದ ಸೋಮವಾರದಿಂದ ಶುಕ್ರವಾರ ಮಧ್ಯಾಹ್ನ ೧೨ ಮತ್ತು ೧೨.೩೦ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತವೆ.
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…