ಜೀ ಕನ್ನಡ ಚಾನೆಲ್

ಡ್ರಾಮಾ ಜ್ಯೂನಿಯರ್ಸ್ ಸೀಸನ್ 5 , ಶುರುವಾಗ್ತಿದೆ ಪ್ರೇಕ್ಷಕರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ಇದೇ ನವೆಂಬರ್ 18 ರಿಂದ ಶನಿವಾರ – ಭಾನುವಾರ ರಾತ್ರಿ 9 ಗಂಟೆಗೆ..!

ಜಾಹೀರಾತುಗಳು
Drama Juniors Season 5
Drama Juniors Season 5

ರಿಯಾಲಿಟಿ ಶೋಗಳಲ್ಲಿ ನಿರೀಕ್ಷೆಗೂ ಮೀರಿ ತನ್ನದೇ ಸಂಚಲನ ಮೂಡಿಸಿದ ವಾಹಿನಿ ಜ಼ೀ ಕನ್ನಡ. ಪ್ರೇಕ್ಷಕರ ಬೇಕು, ಬೇಡಗಳನ್ನು ಅರ್ಥೈಸಿಕೊಂಡು ಇಲ್ಲಿಯವರೆಗೂ ಹತ್ತು ಹಲವು ಸದಭಿರುಚಿಯ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಾ ಹೊಸ ದಾಖಲೆಗಳಿಗೆ ನಾಂದಿ ಹಾಡುತ್ತಿದೆ.

“ಡ್ರಾಮಾ ಜ್ಯೂನಿಯರ್ಸ್” ರಿಯಾಲಿಟಿ ಶೋ ಮುಗ್ಧ ಮನಸ್ಸಿನ ಮಕ್ಕಳ ನಟನಾ ಕೌಶಲ್ಯಕ್ಕೆ ಮತ್ತು ಅವರ ಅಭಿನಯ ಸಾಮರ್ಥ್ಯಕ್ಕೆ ವೇದಿಕೆಯನ್ನು ಒದಗಿಸುವ ಒಂದು ಉತ್ತಮ ಶೋ. ಈ ಶೋ ಕೇವಲ ಮನರಂಜನೆಯನ್ನಷ್ಟೇ ನೀಡದೆ ವಿನೂತನ, ವಿಭಿನ್ನ ಪ್ರಯೋಗಗಳನ್ನು ಮಾಡಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು ಅಭಿನಯದ ಜೊತೆಗೆ ರಂಗಭೂಮಿಯ ವಿವಿಧ ಮಜಲುಗಳನ್ನು ಪರಿಚಯಿಸುವುದರೊಂದಿಗೆ ಸಾಮಾಜಿಕ ಸಂದೇಶಗಳನ್ನು ನೀಡುತ್ತ ಪ್ರೇಕ್ಷಕ ಮಹಾಶಯರಿಂದ ಅದ್ಭುತ ಕಾರ್ಯಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕನ್ನಡ ಚಿತ್ರರಂಗಕ್ಕೆ ಹತ್ತು ಹಲವು ಬಾಲ ಕಲಾವಿದರನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಆರಂಭವಾದ “ಡ್ರಾಮಾ ಜ್ಯೂನಿಯರ್ಸ್”ಎಂಬ ಕಾರ್ಯಕ್ರಮ ಯಶಸ್ವಿಯಾಗಿ ಹಲವು ಪ್ರತಿಭೆಗಳನ್ನು ಪರಿಚಯಿಸಿದೆ. ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶದ ಕನ್ನಡಿಗರೆಲ್ಲರೂ ಅದರ ಒಂದು ಭಾಗವಾಗುವಂತೆ ಮಾಡಿದ ಕೀರ್ತಿ ಜ಼ೀ ಕನ್ನಡ ವಾಹಿನಿಗೆ ಸಲ್ಲುತ್ತದೆ. ಈಗಾಗಲೇ 4 ಸೀಸನ‌್‌ಗಳನ್ನು ಯಶಸ್ವಿಯಾಗಿ ಪೂರೈಸಿದ್ದು “ಡ್ರಾಮಾ ಜ್ಯೂನಿಯರ್ಸ್ ಸೀಸನ್ 5” ಅದ್ಧೂರಿ ಪ್ರಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ.

ಜಾಹೀರಾತುಗಳು
Serial Lakshmi Nivasa

ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ನಡೆದಿದ್ದು, ಅದರಲ್ಲಿ ಅಭಿನಯ ಕೌಶಲ್ಯದ ಹಿನ್ನೆಲೆಯುಳ್ಳ ಒಂದಷ್ಟು ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನು ಈ ಕಾರ್ಯಕ್ರಮಕ್ಕೆ ಮೆರುಗು ಎಂಬಂತೆ ತ್ರಿವಳಿ ರತ್ನಗಳಾದ ಜೂಲಿ ಲಕ್ಷ್ಮಿ, ಕ್ರೇಜ಼ಿ ಸ್ಟಾರ್ ರವಿಚಂದ್ರನ್ ಹಾಗೂ ರಚಿತಾರಾಮ್ ಅವರು ಕಾರ್ಯಕ್ರಮದ ನಿರ್ಣಾಯಕರಾದರೆ, ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರಿಗೂ ಪ್ರೀತಿ ಪಾತ್ರರಾದ “ಮಾಸ್ಟರ್ ಆನಂದ್” ತಮ್ಮ ಮಾತಿನ ಚಟಾಕಿಯ ಮೂಲಕ ನಿರೂಪಿಸಲಿದ್ದಾರೆ.

ವೀಕ್ಷಕರ ನಿರೀಕ್ಷೆಯಂತೆ ಎಲ್ಲವೂ ಅತ್ಯದ್ಭುತವಾಗಿ ಸಜ್ಜುಗೊಳ್ಳುತ್ತಿದ್ದು, ವಿವಿಧ ಆಯಾಮಗಳಲ್ಲಿ ಮನರಂಜನೆ ನೀಡಲು “ಡ್ರಾಮಾ ಜೂನಿಯರ್ಸ್ ಸೀಸನ್ 5 ಪುಟಾಣಿಗಳು” ಇದೇ ನವೆಂಬರ್ 18 ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ, ನಿಮ್ಮ ಜೀ ಕನ್ನಡ ವಾಹಿನಿಯ ಮೂಲಕ ನಿಮ್ಮ ಮನೆ – ಮನಕ್ಕೆ ಲಗ್ಗೆ ಇಡಲಿದ್ದಾರೆ.

Recent Posts

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

6 days ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

1 week ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

2 weeks ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

2 weeks ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

3 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

1 month ago