ಕನ್ನಡಿಗರ ಅಚ್ಚುಮೆಚ್ಚಿನ ‘ಜೀ಼ ಕನ್ನಡ’ ವಾಹಿನಿಯು ಇದೀಗ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ “ಗಂಧದಗುಡಿ” ಸಿನಿಮಾವನ್ನು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಮಾಡಲು ಸಜ್ಜಾಗಿದೆ.
ಮೂರು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅಪ್ಪು ಹಾಗು ಪವರ್ ಸ್ಟಾರ್ ಎಂದು ಕರೆಯಲ್ಪಡುವ ಪುನೀತ್ ರಾಜ್ ಕುಮಾರ್ ಅವರು ಹಲವಾರು ಸಿನೆಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಬಾಲನಟನಾಗಿ 12 ಚಿತ್ರಗಳಲ್ಲಿ ನಟಿಸಿದ್ದರು. “ಬೆಟ್ಟದ ಹೂವು” ಚಿತ್ರಕ್ಕಾಗಿ ಇವರಿಗೆ ಅತ್ಯುತ್ತಮ ಬಾಲನಟ ರಾಷ್ಟ್ರ ಪ್ರಶಸ್ತಿ ಕೂಡ ದೊರೆತಿದೆ. ತದನಂತರ ಮೊದಲ ಬಾರಿಗೆ ನಟನಾಗಿ ‘ಅಪ್ಪು’ ಎಂಬ ಚಿತ್ರದಲ್ಲಿ ನಟಿಸಿದರು ಮತ್ತು ಅಲ್ಲಿಂದ ಅವರು ಸಿನಿಮಾ ಕ್ಷೇತ್ರದಲ್ಲಿ ಹೆಸರು ಮಾಡುತ್ತಾರೆ. ಪುನೀತ್ ಒಬ್ಬ ನಟ ಮಾತ್ರವಲ್ಲ, ಹಿನ್ನೆಲೆಗಾಯಕ, ದೂರದರ್ಶನ ನಿರೂಪಕ ಮತ್ತು ನಿರ್ಮಾಪಕರೂ ಹೌದು. ಅವರು ಮುಖ್ಯವಾಗಿ ಕನ್ನಡ ಕ್ಷೇತ್ರಕ್ಕಾಗಿ ಮಾತ್ರ ಕೆಲಸ ಮಾಡಿದರು.
ಪುನೀತ್ ಅವರ 3 ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅನೇಕ ಬ್ಲಾಕ್ಬಸ್ಟರ್ ಚಲನಚಿತ್ರಗಳನ್ನು ನೀಡಿದ್ದಾರೆ. ಇದರಿಂದ ಅವರಿಗೆ ಸಿನೆಮಾ ಕ್ಷೇತ್ರದಲ್ಲಿ ಅತಿದೊಡ್ಡ ಅಭಿಮಾನಿ ಬಳಗವನ್ನು ಗಳಿಸುವಂತೆ ಮಾಡಿತು. ವಸಂತ ಗೀತೆ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಭಕ್ತ ಪ್ರಹ್ಲಾದ, ಮತ್ತು ಯಾರಿವನು ಇವು ಅವರ ಯಶಸ್ವಿ ಚಲನಚಿತ್ರಗಳು.
ಎಲ್ಲರ ಪ್ರೀತಿಯ ಅಪ್ಪು ಕಾಣಿಸಿಕೊಂಡಿರುವ ಕೊನೆಯ ಚಿತ್ರ “ಗಂಧದಗುಡಿ” ಪುನೀತ್ ರಾಜ್ಕುಮಾರ್ ಕಾಣಿಸಿಕೊಂಡಿರುವ ಕಡೆಯ ಸಿನಿಮಾ ಅಕ್ಟೋಬರ್ 28 2022 ರಲ್ಲಿ ರಿಲೀಸ್ ಆಗಿತು. ಇದೀಗ ಈ ಸಿನಿಮಾ ಜೀ಼ ಕನ್ನಡದ ಮೂಲಕ ಕಿರುತೆರೆಗೆ ಲಗ್ಗೆಯಿಡುತ್ತಿದೆ.
‘ಗಂಧದಗುಡಿ’ ಇದೊಂದು ಡಾಕ್ಯುಮೆಂಟರಿ ಸಿನಿಮಾ, ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ಈ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಗಂಧದಗುಡಿ ಸಿನಿಮಾ ಪುನೀತ್ ಅಭಿನಯದ ಕೊನೆಯ ಚಿತ್ರ, ಇದರಿಂದ ಅಪ್ಪು ಅವರಿಗಿದ್ದ ನಿಸರ್ಗ ಪ್ರೀತಿಯನ್ನು ವೀಕ್ಷಕರೆದುರು ತೆರೆದಿಟ್ಟಿದೆ.
ಗಂಧದಗುಡಿ ಚಿತ್ರದಲ್ಲಿ ಕರ್ನಾಟಕದ ಕಾಡು, ನದಿ, ಸಮುದ್ರ ಹಾಗೂ ವನ್ಯಜೀವಿ ತಾಣವನ್ನ ಒಟ್ಟಿಗೆ ಸೆರೆ ಹಿಡಿಯಲಾಗಿದೆ. ಈ ಅದ್ಬುತ ಸಿನಿಮಾ “ಗಂಧದಗುಡಿ” ಇದೇ ಭಾನುವಾರ ಸಂಜೆ 5 ಗಂಟೆಗೆ ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
This website uses cookies.
Read More