ಉದಯ ಟಿವಿ

ನೇತ್ರಾವತಿ ಸಂಜೆ ೭:೩೦ ಕ್ಕೆ , ಗೌರಿಪುರದ ಗಯ್ಯಾಳಿಗಳು ಸಂಜೆ ೬:೩೦ಕ್ಕೆ – ಉದಯ ಟಿ.ವಿ

ಜಾಹೀರಾತುಗಳು

ಉದಯ ಟಿವಿಯಲ್ಲಿ ಒಂದೇ ದಿನ ೨ ಧಾರಾವಾಹಿಗಳು ೨ದಶಕದ ನಂತರ ಬಣ್ಣ ಹಚ್ಚುತ್ತಿರುವ “ಅಂಜಲಿ” ಮಾರ್ಚ ೧೫ರಿಂದ

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ʻಉದಯ ಟಿವಿʼ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಈ ಗುಚ್ಛಕ್ಕೆ ಎರಡು ಹೊಸ ಧಾರಾವಾಹಿಗಳು ಸೇರ್ಪಡೆಯಾಗುತ್ತಿವೆ. ಮಾರ್ಚ್‌ ೧೫ ರಿಂದ ಸಂಜೆ ೬:೩೦ ಕ್ಕೆ ಹಾಸ್ಯಮಯ ಸಸ್ಪೆನ್ಸ್‌ ಕಥೆ ʻಗೌರಿಪುರದ ಗಯ್ಯಾಳಿಗಳುʼ ಹಾಗೂ ಸಂಜೆ ೭:೩೦ಕ್ಕೆ ಮಂಜುನಾಥಸ್ವಾಮಿಯ ಭಕ್ತೆಯೂ ಆಗಿರುವ ಆಶಾಕಾರ್ಯಕರ್ತೆಯೊಬ್ಬಳ ಜೀವನ ಪಯಣ ʻನೇತ್ರಾವತಿʼ.

Gauripurada Gayyaligalu Kannada Serial
Gauripurada Gayyaligalu Kannada Serial

“ಗೌರಿಪುರದ ಗಯ್ಯಾಳಿಗಳು”

ಗೌರಿಪುರ ಎಂಬ ಮಧ್ಯಮ ವರ್ಗದವರ ಕಾಲನಿಯಲ್ಲಿ ಇರುವ ನಾಲ್ವರು ಮಧ್ಯಮವರ್ಗದ ಗಯ್ಯಾಳಿಗಳು ಸ್ತ್ರೀ ಸಂಘ ಸ್ಥಾಪಿಸಿಕೊಂಡು ಹಪ್ಪಳ ಸಂಡಿಗೆ ತಯಾರು ಮಾಡುವಂಥವರು. ಇವರ ಬಾಯಿಗೆ ಕಾಲೊನಿಯೇ ಹೆದರುತ್ತದೆ. ಇವರ ನಡುವೆ ಸಮಸ್ಯೆಗಳಿವೆ. ಆದರೆ ಹೊರಗಿನವರು ಬಂದರೆ ಒಗ್ಗಟ್ಟಾಗುತ್ತಾರೆ. ಇಂಥವರ ನಡುವೆ ಗುಲಾಬಿಯಂಥ ಹುಡುಗಿ ತನ್ನ ತಂದೆಯ ನಿಗೂಢ ಸಾವಿಗೆ ಸಾಕ್ಷಿ ಹುಡುಕಿಕೊಂಡು ಬರುತ್ತಾಳೆ. ಈ ಗಯ್ಯಾಳಿಗಳ ನಡುವೆ ನಡೆಯುವ ಹಾಸ್ಯಮಯ ಪ್ರಸಂಗಗಳು ಹಾಗೂ ಗುಲಾಬಿಯ ನಿಗೂಢ ನಡೆಗಳು ಕಥೆಗೆ ಹೊಸತನದ ಸ್ಪರ್ಶ ನೀಡಿವೆ. ರವಿತೇಜ ನಿರ್ದೇಶನದ ಜವಾಬ್ದಾರಿನ್ನು ಹೊತ್ತಿದ್ದಾರೆ. ತಾರಾಗಣದಲ್ಲಿ ನವ್ಯ, ರೋಹಿಣಿ, ದಿವ್ಯ, ವೀಣಾ, ರಚನಾ, ಆರ್ವ ಬಸವಟ್ಟಿ, ರವಿತೇಜ ಮುಂತಾದವರಿದ್ದಾರೆ.

ಹಾಸ್ಯನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ತಮ್ಮ ʻಸುರಾಗ್‌ ಪ್ರೊಡಕ್ಷನ್ಸ್‌ ಲಾಂಛನದಲ್ಲಿʼಈ ಧಾರಾವಾಹಿ ನಿರ್ಮಿಸುತ್ತಿದ್ದಾರೆ. ಇದು ಕಿರುತೆರೆಯಲ್ಲಿ ಅವರ ಮೊದಲ ಪ್ರಯತ್ನ.

“ಗೌರಿಪುರದ ಗಯ್ಯಾಳಿಗಳು” ಮಾರ್ಚ್‌ ೧೫ರಿಂದ ಸೋಮವಾರದಿಂದ ಶನಿವಾರ ಸಂಜೆ ೬.೩೦ಕ್ಕೆ ಪ್ರಸಾರವಾಗಲಿದೆ.
“ನೇತ್ರಾವತಿ” ತನ್ನೊಳಗೆ ನೋವಿದ್ದರೂ ತೋರಿಸಿಕೊಳ್ಳದೇ ಇತರರಿಗೆ ನಗು ಹಂಚುವ, ಸಮಾಧಾನ ನೀಡುವ, ಆಶಾಕಾರ್ಯಕರ್ತೆ, ಮಂಜುನಾಥ ಸ್ವಾಮಿಯ ಭಕ್ತೆ ನೇತ್ರಾವತಿ. ವೃತ್ತಿ ಜೀವನದ ಏರಿಳಿತಗಳು ಇವಳನ್ನು ಒಬ್ಬ ಒರಟ ನಾಯಕನ ಮನೆಗೆ ತಂದು ನಿಲ್ಲಿಸುತ್ತದೆ. ಶರೀರದ ಗಾಯಕ್ಕೆ ಮುಲಾಮು ಹಚ್ಚಬಲ್ಲ ನೇತ್ರಾವತಿ, ಆ ಒರಟನ ಮನಸ್ಸಿನ ಗಾಯಕ್ಕೆ ಮದ್ದು ಮಾಡಿ ಅವನಿಗೆ ಸತ್ಯದ ಅರಿವು ಮೂಡಿಸುವುದು ಮುಂದಿನ ಪಯಣ.

ಜಾಹೀರಾತುಗಳು

ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ, ಡಾ.ರಾಜ್‌ಕುಮಾರ್‌ ಕುಟುಂಬಕ್ಕೆ ಸೇರಿದ ಪೂರ್ಣಿಮಾ ಪ್ರೊಡಕ್ಷನ್ಸ್‌ ಲಾಂಛನದಡಿ ʻನೇತ್ರಾವತಿʼ ಧಾರಾವಾಹಿ ಮೂಡಿಬರಲಿದೆ. ಕಿರುತೆರೆಯ ಯಶಸ್ವಿ ನಿರ್ದೇಶಕ ಸಂತೋಷ್‌ಗೌಡ ʻನೇತ್ರಾವತಿʼಯನ್ನು ಹೊಸ ಥರದ ನಿರೂಪಣಾ ಶೈಲಿಯೊಂದಿಗೆ ನಿರ್ದೇಶಿಸುತ್ತಿದ್ದಾರೆ. ತಾರಾಗಣದಲ್ಲಿ ದುರ್ಗಾಶ್ರೀ, ಸನ್ನಿ ಮಹಿಪಾಲ್, ಸಚಿನ್‌, ಚೈತ್ರಾ ರಾವ್‌,‌ ದಾನಪ್ಪ, ಐಶ್ವರ್ಯ ಮುಂತಾದವರಿದ್ದಾರೆ. ಛಾಯಾಗ್ರಹಣ: ದಯಾಕರ್‌, ಸಂಕಲನ: ಗುರುಮೂರ್ತಿ ಹೆಗಡೆ.

ಎರಡು ದಶಕ ನಂತರ ಬಣ್ಣ ಹಚ್ಚುತ್ತಿರುವ ಅಂಜಲಿ:

Nethravathi Serial Cast

ಅನಂತನ ಆವಾಂತರ, ತರ್ಲೆ ನನ್ನ ಮಗ, ನೀನು ನಕ್ಕರೆ ಹಾಲು ಸಕ್ಕರೆ ಮುಂತಾದ ಚಿತ್ರಗಳ ನಾಯಕಿಯಾಗಿ ತೊಂಬತ್ತರ ದಶಕದಲ್ಲಿ ಮಿಂಚಿದ್ದ ಕಲಾವಿದೆ ಅಂಜಲಿ ೨೨ ವರ್ಷಗಳ ನಂತರ ʼನೇತ್ರಾವತಿʼ ಧಾರಾವಾಹಿ ಮೂಲಕ ಬಣ್ಣ ಹಚ್ಚುತ್ತಿದ್ದಾರೆ. ನೇತ್ರಾವತಿಯ ತಾಯಿ ಭಾಗೀರಥಿಯಾಗಿ ಕಾಣಿಸಿಕೊಳ್ಳುತ್ತಿರುವ ಅಂಜಲಿ ಈ ಥರದ ಭಾವನಾತ್ಮಕ ಪಾತ್ರವನ್ನು ಮೊದಲ ಸಲ ನಿರ್ವಹಿಸುತ್ತಿರುವುದಕ್ಕೆ ಸಂಭ್ರಮ ವ್ಯಕ್ತಪಡಿಸುತ್ತಾರೆ. ಕನ್ನಡಿಗರ ಹೃದಯಕ್ಕೆ ಇನ್ನಷ್ಟು ಹತ್ತಿರವಾಗಿರುವ ಉದಯ ಟಿವಿಯಲ್ಲಿ ಅಂಜಲಿಯವರ ಕಂ ಬ್ಯಾಕ್‌ಆಗುತ್ತಿರುವುದು ವಿಶೇಷ.

“ನೇತ್ರಾವತಿ” ಮಾರ್ಚ್‌ ೧೫ ರಿಂದ ಸೋಮವಾರದಿಂದ ಶನಿವಾರ ಸಂಜೆ ೭:೩೦ ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Recent Posts

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

4 days ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

4 days ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

2 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

3 weeks ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

3 weeks ago

ಶ್ರೀ ಬ್ರಾಹ್ಮೀ ಹೊಸ ಕಥೆಯ ಶ್ರಾವಣಿ ಸುಬ್ರಮಣ್ಯ ಜೀ಼ ಕನ್ನಡದಲ್ಲಿ ಶುಭಾರಂಭ ಮಾರ್ಚ್‌ 18ರಿಂದ ಮಹಾಮನೋರಂಜನೆಗೆ ಮುನ್ನುಡಿ

ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್‌ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…

1 month ago