ಸ್ಟಾರ್ ಸುವರ್ಣ

ಗೌರಿಶಂಕರ – ಶುರುವಾಗ್ತಿದೆ ಬೆಂಕಿ ಜೊತೆ ಬಿರುಗಾಳಿಯ ಪ್ರೀತಿಕಥೆ ,.ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ !

ಜಾಹೀರಾತುಗಳು

ಇದೇ ನವೆಂಬರ್ 13, ಸೋಮವಾರದಿಂದ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ – ಗೌರಿಶಂಕರ

Gowri Shankara Serial Star Suvarna
Gowri Shankara Serial Star Suvarna

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಕಥೆ “ಗೌರಿಶಂಕರ”.

ಕರ್ನಾಟಕದ ಸುಂದರ ತಾಣ ಹಾಸನಾಂಬೆಯ ತವರೂರಾದ ಹಾಸನದಲ್ಲಿ ಈ ಕತೆಯು ಕೇಂದ್ರೀಕೃತವಾಗಿರುತ್ತದೆ. ಈ ಧಾರಾವಾಹಿಯ ನಾಯಕಿ ‘ಗೌರಿ’ ಸಮಾಜದಲ್ಲಿ ಘನತೆ ಗೌರವವನ್ನು ಹೊಂದಿರುವ ಪರಿವಾರದಲ್ಲಿ ಬೆಳೆದಿರುವ ಈಕೆ ಯಾರನ್ನೂ ನೋಯಿಸದ ಮುಗ್ದ ಮನಸ್ಸಿನ ಕಣ್ಮಣಿ. ಆದರೆ ಸಮಯ ಬಂದರೆ ತನ್ನ ನಿಲುವನ್ನು ಸ್ಪಷ್ಟವಾಗಿ ಮಾತನಾಡಬಲ್ಲ ಧೈರ್ಯವಂತೆ ಕೂಡ. ಜೊತೆಗೆ ತಂದೆಯಂತೆ ತಾನು ಪ್ರೊಫೆಸರ್ ಆಗಬೇಕೆಂಬ ಕನಸನ್ನು ಹೊತ್ತಿರೋಳು. ಇನ್ನು ಕಥಾ ನಾಯಕ ‘ಶಂಕರ’ ಅಲಿಯಾಸ್ ಜೋಗಿ, ಹೆಣ್ಣು ಮಕ್ಳು ಅಂದ್ರೆ ನಾಲ್ಕುಗೋಡೆ ಮಧ್ಯೆ ಇರ್ಬೇಕು ಅಂತ ನಂಬಿರೋ ಮನೆತನದಲ್ಲಿ ಬೆಳೆದವ. ಈತ ನೋಡೋಕೆ ರಫ್‌ ಆದ್ರೆ ಮಗುವಿನಂತ ಮನಸ್ಸು. ತನಗನಿಸಿದ್ದನ್ನು ಮಾಡಲೇಬೇಕು ಅನ್ನೋ ಹಠವಾದಿ.

ಗೌರಿಶಂಕರ

ಒಂದು ಕಡೆ ಶಾಂತಿ, ಸಹನೆ, ತಾಳ್ಮೆಯಿಂದ ಕೂಡಿದ ಗೌರಿ ಪರಿವಾರ. ಮತ್ತೊಂದೆಡೆ ಅಧಿಕಾರ, ದರ್ಪ, ಹಣ ತುಂಬಿರೋ ಶಂಕರನ ಪರಿವಾರ. ಈ ಎರಡೂ ತದ್ವಿರುದ್ಧ ಭಾವಗಳನ್ನು ಹೊಂದಿರುವ ಇವರಿಬ್ಬರ ನಡುವೆ ನಡೆಯುವ ಘರ್ಷಣೆ, ಸಂಧಾನ, ಪ್ರೇಮಾಂಕುರವೇ ಈ ಧಾರಾವಾಹಿಯ ಮುಖ್ಯಕಥಾ ಹಂದರ.

ಜಾಹೀರಾತುಗಳು

“ಗೌರಿಶಂಕರ” ಧಾರಾವಾಹಿಯಲ್ಲಿ ನಾಯಕನಾಗಿ ಯಶವಂತ್, ನಾಯಕಿಯಾಗಿ ಕೌಸ್ತುಭಮಣಿ ನಟಿಸುತ್ತಿದ್ದಾರೆ. ಜೊತೆಗೆ ಜನಪ್ರಿಯ ಕಲಾವಿದರಾದ ವಿದ್ಯಾಮೂರ್ತಿ, ಮೋಹನ್, ಕೀರ್ತಿ ಭಾನು ಸೇರಿದಂತೆ ಇನ್ನು ಹಲವಾರು ಕಲಾವಿದರು ಅಭಿನಯಿಸುತ್ತಿದ್ದಾರೆ.

ದೀಪಾವಳಿ ಹಬ್ಬದ ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಬರ್ತಿದೆ ಹೊಚ್ಚ ಹೊಸ ಧಾರಾವಾಹಿ “ಗೌರಿಶಂಕರ” ಇದೇ ನವೆಂಬರ್ 13, ಸೋಮವಾರದಿಂದ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

Recent Posts

ಶೀಮದ್‌ ರಾಮಾಯಣ , ಉದಯ ಟಿವಿಯಲ್ಲಿ ಮೇ 20 ರಿಂದ ಸೋಮವಾರ-ಶನಿವಾರ ಸಂಜೆ 6 ಗಂಟೆಗೆ

ಉದಯ ಟಿವಿ ಶೀಮದ್‌ ರಾಮಾಯಣ ಕನ್ನಡ ಟೆಲಿವಿಷನ್‌ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…

22 hours ago

ಸುವರ್ಣ ಗೃಹಮಂತ್ರಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ

ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…

4 days ago

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

2 weeks ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

2 weeks ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

3 weeks ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

3 weeks ago