ಶ್ರೀ ದುರ್ಗಾ ಕ್ರೀಯೇಷನ್ಸ್ ವಿಭಿನ್ನ ಕಥಾಹಂದರವುಳ್ಳ “ಕಾದಂಬರಿ” ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ. “ಕಾದಂಬರಿ” ಒಂದು ಕೆಳಮಧ್ಯಮ ವರ್ಗದ ಹುಡುಗಿ. ಹೊರದೇಶಕ್ಕೆ ತೆರಳಿ ದುಡಿದು ಬರುವುದಾಗಿ ಎಂದು ಹೇಳಿ ಹೋದ ಅಪ್ಪನ ಸುಳಿವಿಲ್ಲ. ಇದ್ದೊಬ್ಬ ಪ್ರೀತಿಯ ಅಣ್ಣ ಜೀವನದಲ್ಲಿ ಸೋತು ಸರಾಯಿಯ ಸೆರೆಯಾಗಿದ್ದಾನೆ. ಹೀಗಿರುವಾಗ ತುಂಬು ಕುಟುಂಬಕ್ಕೆ ಆಧಾರವಾಗಿ ಇವಳೊಬ್ಬಳದೇ ದುಡಿಮೆ. ಮನೆಯನ್ನು ನೀಯಂತ್ರಿಸಲು ಹಗಲಿರುಳು ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ಇವಳ ಶ್ರದ್ಧೆ, ಪರಿಶ್ರಮ ಕಂಡು ಇವಳ ಬಾಸ್ ಸುದರ್ಶನ್ ಚಕ್ರವರ್ತಿಗೆ ಇವಳ ಮೇಲೆ ಅಭಿಮಾನ, ಅಪಾರ ನಂಬಿಕೆ.
ಮನೆ ಮಗನಂತೆ ದುಡಿತಿರೋ ಕಾದಂಬರಿಗೆ ತನ್ನದೇ ಪುಟ್ಟ ಕನಸಿನ ಗೂಡಿದೆ. ಈಗಿನ ಕಾಲದ ಹುಡಿಗಿಯರಿಗೆಲ್ಲಾ ಬಣ್ಣ-ಬಣ್ಣದ ಕನಸುಗಳಿದ್ದರೆ, ಇವಳಿಗೊಂದೇ ಆಸೆ. ಇವಳ ಮನಸನ್ನ ಅರ್ಥ ಮಾಡಿಕೊಳ್ಳೋ ಒಬ್ಬ ಸಂಗಾತಿಯ ಕೈಹಿಡಿದು, ೨ ಮುದ್ದಾದ ಮಕ್ಕಳನ್ನು ಹೆತ್ತು ಗೃಹಿಣಿಯಾಗಿ ಸಂಸಾರ ತೂಗಿಸಬೇಕು ಅಂತ. ಆದರೆ ಬೆನ್ನೇರಿರೋ ಮನೆ ಜವಾಬ್ದಾರಿ ಇವಳ ಕನಸನ್ನು ನನಸು ಮಾಡುತ್ತಾ? ಎಂಬುದು ಈ ಧಾರಾವಾಹಿಯ ಸಾರಾಂಶ.
“ಎಲ್ಲಾ ಧಾರಾವಾಹಿಗಳಲ್ಲಿ ತೋರಿಸೋ ದ್ವೇಷ ಅಸೂಯೆಗಳ ಕಿತ್ತಾಟವಿಲ್ಲದೆ, ಮಮತೆಗೆ ಕರಗೋ ಮಿಡ್ಲ್ ಕ್ಲಾಸ್ ಫ್ಯಾಮಿಲಿಯ ಹೈಕ್ಲಾಸ್ ಕಥೆ ಇದಾಗಿದೆ” ಎಂದು ಎನ್ನುತ್ತಾರೆ ನಿರ್ದೇಶಕ ದರ್ಶಿತ್ ಭಟ್. ಪ್ರಸಿದ್ಧ ಧಾರಾವಾಹಿಗಳನ್ನು ನೀಡಿರುವ ಗಣಪತಿ ಭಟ್ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸುನಾದ್ ಗೌತಮ್ ಸಂಗೀತ ಸಂಯೋಜನೆ, ಕೃಷ್ಣ ಕಂಚನಹಳ್ಳಿಯವರ ಛಾಯಾಗ್ರಹಣ, ಗಿರೀಶ್ ಚಿತ್ರಕಥೆ ಮತ್ತು ತುರುವೆಕೆರೆ ಪ್ರಸಾದ್ ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ನಾಯಕಿಯಾಗಿ ಪವಿತ್ರ ನಾಯಕ್ ಮತ್ತು ನಾಯಕನಾಗಿ ರಕ್ಷಿತ್ ನಟಿಸುತ್ತಿದ್ದಾರೆ. ನಾಗೇಂದ್ರ ಶಾ, ಮಾಲತಿ ಸರ್ ದೇಶಪಾಂಡೆ, ಸುರೇಶ್ ರೈ, ಗಾಯಿತ್ರಿ ಪ್ರಭಾಕರ್, ಪ್ರಥಮಾ ರಾವ್, ನಿರಂಜನ್, ಶ್ವೇತಾ, ಪ್ರಗತಿ, ಅರ್ಪಿತ, ಪೃಥ್ವಿ ಯುವಸಾಗರ್, ಲಿಖಿತ, ಅಶೋಕ್ ಬಿ.ಎ, ರಾಧಿಕಾ ಶೆಟ್ಟಿ, ಆನಂದ್ ಹೀಗೆ ಹಲವಾರು ಕಲಾವಿದರನ್ನು ಒಳಗೊಂಡಿದೆ ಈ ಧಾರಾವಾಹಿ. “ಕಾದಂಬರಿ”ಇದೇ ೨೩ರಿಂದ ಸೊಮವಾರದಿಂದ ಶನಿವಾರ ಮದ್ಯಾಹ್ನ ೨ಗಂಟೆಗೆ ಉದಯಟಿವಿಯಲ್ಲಿ ಪ್ರಸಾರವಾಗಲಿದೆ.
ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
This website uses cookies.
Read More