ಹೊಸ ಅಲೆಯ ವಿನೂತನ ಧಾರಾವಾಹಿಗಳನ್ನು ಕನ್ನಡಿಗರಿಗೆ ನೀಡುವಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ “ಲಕ್ಷ್ಮಿ ಟಿಫನ್ ರೂಮ್” ಎಂಬ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ.
ಕಥಾ ನಾಯಕಿ ವರಲಕ್ಷ್ಮಿ ನೇರ ನುಡಿಯನ್ನು ಹೊಂದಿರೋಳು, ಎಂತಹ ಸಂದರ್ಭದಲ್ಲೂ ಈಕೆ ನ್ಯಾಯದ ಪರ ನಿಲ್ಲುವ ಗಟ್ಟಿಗಿತ್ತಿ. ಐಎಎಸ್ ಮಾಡಬೇಕೆಂಬ ಕನಸನ್ನು ಕಂಡಿರುತ್ತಾಳೆ. ಆದರೆ ಪರಿಸ್ಥಿತಿಯ ಕೈಗೊಂಬೆಯಾಗಿ, ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಸೀಮಿತ ಎಂಬ ಮನಸ್ಥಿತಿಯಿರುವ ಮನೆತನಕ್ಕೆ ಸೊಸೆಯಾಗಿ ಹೋಗುತ್ತಾಳೆ.
ಆ ಮನೆಯ ರೀತಿ ರಿವಾಜುಗಳು, ಕಟ್ಟುಪಾಡುಗಳನ್ನು ಭೇಧಿಸಿ ತನ್ನ ಗಂಡನ ಮನೆಯಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಿ, ವರಲಕ್ಷ್ಮಿ ತನ್ನ ಐಎಎಸ್ ಕನಸನ್ನು ನನಸಾಗಿಸುತ್ತಾಳಾ ? ಈ ಮೂರುಗಂಟಿನ ಬಂಧ, ವರು ಕನಸುಗಳನ್ನು ಕಟ್ಟಿಹಾಕುತ್ತಾ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.
ಹೆಣ್ಣೊಬ್ಬಳು ಕೂಡು ಕುಟುಂಬಕ್ಕೆ ಸೊಸೆಯಾಗಿ ಹೋದಾಗ ತನ್ನ ಕನಸನ್ನು ನನಸಾಗಿಸಲು ಏನೆಲ್ಲಾ ಕಷ್ಟಗಳನ್ನು ಎದುರಿಸಬೇಕಾಗುತ್ತೆ ಎಂಬುದನ್ನು ಈ ಕಥೆಯಲ್ಲಿ ಅತ್ಯದ್ಭುತವಾಗಿ ತೋರಿಸಲಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ವಿಶೇಷ ಪಾತ್ರದಲ್ಲಿ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೊತೆಗೆ ಸುನೇತ್ರ ಪಂಡಿತ್, ಅನಂತವೇಲು, ವಚನ್, ಮಧುಮಿತಾ, ವಿಜಯಲತಾ, ಕಾವ್ಯ, ಪ್ರೀತಮ್ ಮಕ್ಕಿಹಾಳಿ, ಭಗತ್ ಸೇರಿದಂತೆ ಇನ್ನು ಅನೇಕ ಕಲಾವಿದರು ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.
ಶುರುವಾಗ್ತಿದೆ ಪ್ರೀತಿ, ಆಕಾಂಕ್ಷೆಯನ್ನೊಳಗೊಂಡ ವರಲಕ್ಷ್ಮಿಯ ಕಥೆ “ಲಕ್ಷ್ಮಿ ಟಿಫನ್ ರೂಮ್” ಇದೇ ಸೋಮವಾರದಿಂದ ಸಂಜೆ 6.30 ಕ್ಕೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
This website uses cookies.
Read More