ಸ್ಟಾರ್ ಸುವರ್ಣ

ಮಾಟಗಾತಿಯ ಕಾಡಿನಲ್ಲಿ – ಸ್ಟಾರ್ ಸುವರ್ಣದಲ್ಲಿ ಬರ್ತಿದೆ 3 ಗಂಟೆಗಳ ವಿಶೇಷ ಸಿನಿಮಾ ರೇಣುಕಾ ಯಲ್ಲಮ್ಮ..ಇದೇ ಭಾನುವಾರ ಸಂಜೆ 6.30 ಕ್ಕೆ..!

ಜಾಹೀರಾತುಗಳು
Maatagathiya Kadinalli Udho Udho Shri Renuka Yellamma
Maatagathiya Kadinalli Udho Udho Shri Renuka Yellamma

ಕನ್ನಡ ಕಿರುತೆರೆಯಲ್ಲಿ ಮನರಂಜನೆಯ ವರ್ಷಧಾರೆಯನ್ನೇ ಹರಿಸುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷರಿಗಾಗಿ ವಿಶೇಷ ಚಿತ್ರವೊಂದನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿಯು ಆರಂಭದಿಂದಲೂ ಪ್ರೇಕ್ಷಕರ ಮನಗೆದ್ದು ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ಮನೆ ಮನೆಯ ಮಾತಾಗಿದೆ.

ಈ ನಿಟ್ಟಿನಲ್ಲಿ ವಾಹಿನಿಯು “ಮಾಟಗಾತಿಯ ಕಾಡಿನಲ್ಲಿ” ರೇಣುಕಾ ಯಲ್ಲಮ್ಮ ಎಂಬ ಶೀರ್ಷಿಕೆಯಡಿ ಸ್ಪೆಷಲ್ ಸಿನಿಮಾವೊಂದನ್ನು ಪ್ರಸಾರಮಾಡುತ್ತಿದೆ. ಕಥೆಯ ಅನುಸಾರ ಆ ಒಂದು ಕಾಡಿನಲ್ಲಿ ಎಷ್ಟೋ ವರ್ಷಗಳಿಂದ ಚಿರಯವ್ವನವನ್ನು ಹೊಂದಿರುವ ಕನಕಾಂಬರಿ ಎಂಬ ಮಾಟಗಾತಿಯೊಬ್ಬಳು ವಾಸವಾಗಿರುತ್ತಾಳೆ .ಆದರೆ ಪೌರ್ಣಮಿಯ ದಿನ ಹತ್ತಿರವಾಗುತ್ತಿದ್ದಂತೆ ಆಕೆಯ ಶಕ್ತಿ ಕ್ಷೀಣಿಸಿ ನಿಜ ಸ್ವರೂಪಕ್ಕೆ ಬದಲಾಗುತ್ತಾಳೆ ಎಂಬ ಭಯ ಆಕೆಗೆ ಕಾಡುತ್ತಿರುತ್ತದೆ. ಹೀಗಾಗಿ ಆಕೆ ಇನ್ನಷ್ಟು ಶಕ್ತಿ ಹಾಗು ಯವ್ವನವನ್ನು ಉಳಿಸಿಕೊಳ್ಳೋದಕ್ಕಾಗಿ ಏನೆಲ್ಲಾ ಮಾಡುತ್ತಾಳೆ ? ತಮ್ಮ ಬುದ್ದಿ ಶಕ್ತಿಯನ್ನು ಉಪಯೋಗಿಸಿಕೊಂಡು ರೇಣುಕಾ ಯಲ್ಲಮ್ಮ ಹೇಗೆ ಅವಳ ಮುಂದೆ ವಿಜಯ ಸಾಧಿಸುತ್ತಾರೆ ? ಎಂಬುದೇ ಮುಖ್ಯ ಕಥಾ ಹಂದರ.

ವರ್ಷಗಳ ಬಳಿಕ ನಟಿ ಮಯೂರಿಯವರು ಕನಕಾಂಬರಿ ಎಂಬ ಮಾಟಗಾತಿಯ ಪಾತ್ರದ ಮೂಲಕ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅತ್ಯುತ್ತಮ ಗ್ರಾಫಿಕ್ಸ್ ತಂತ್ರಜ್ಞಾನವನ್ನು ಬಳಸಿ ವಿಶೇಷ ಸಿನಿಮಾದ ಚಿತ್ರೀಕರಣ ಮಾಡಿದ್ದು, ಇದು ಕಿರುತೆರೆಯಲ್ಲಿ ಹೊಸ ಛಾಪನ್ನು ಮೂಡಿಸಲಿದೆ.

ಜಾಹೀರಾತುಗಳು

ತಪ್ಪದೇ ವೀಕ್ಷಿಸಿ 3 ಗಂಟೆಗಳ ವಿಶೇಷ ಚಿತ್ರ “ಮಾಟಗಾತಿಯ ಕಾಡಿನಲ್ಲಿ-ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ “. ಇದೇ ಆಗಸ್ಟ್ 6, ಭಾನುವಾರದಂದು ಸಂಜೆ 6.30 ಕ್ಕೆ ನಿಮ್ಮ ನೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ.

Recent Posts

ಸುವರ್ಣ ಗೃಹಮಂತ್ರಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ

ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…

2 days ago

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

1 week ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

2 weeks ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

3 weeks ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

3 weeks ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

4 weeks ago