ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ ‘ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು ತನ್ನ ವಿಭಿನ್ನ ಕಥಾ ಹಂದರದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ.
ನೇರ ನುಡಿಯನ್ನು ಹೊಂದಿರೋ ಕಥಾನಾಯಕಿ ವರಲಕ್ಷ್ಮಿ ಐಎಎಸ್ ಮಾಡಬೇಕೆಂಬ ಕನಸನ್ನು ಕಂಡಿರುತ್ತಾಳೆ. ಆದರೆ ಕಥಾನಾಯಕ ಸ್ಕಂದನಿಗೆ ವರಲಕ್ಷ್ಮಿಯ ಮೇಲೆ ಮೊದಲ ನೋಟದಲ್ಲೇ ಪ್ರೇಮಾಂಕುರವಾಗುತ್ತದೆ. ಮದುವೆ ಆದ್ರೆ ಆಕೆಯನ್ನೇ ಮದುವೆಯಾಗ್ಬೇಕು ಅನ್ನೋ ಸ್ಕಂದನ ಆಸೆಗೆ ಅಜ್ಜಯ್ಯ ಸಮ್ಮತಿ ನೀಡುವುದಿಲ್ಲ. ಹೆಚ್ಚು ಓದದೇ ಇರೋ ಹುಡುಗಿಯೇ ಈ ಮನೆಗೆ ಸೊಸೆಯಾಗಿ ಬರಬೇಕು ಎಂದು ಆದೇಶಿಸ್ತಾರೆ. ಮುಂದೆ ಮನೆಯವರೆಲ್ಲಾ ಸೇರಿ ಸ್ಕಂದನ ಪ್ರೀತಿಯನ್ನ ಉಳಿಸಲು ಅವನು ಇಷ್ಟ ಪಟ್ಟಿರೋ ಹುಡುಗಿ ಜೊತೆಗೆ ಮದುವೆ ಮಾಡಿಸೋ ಪ್ಲಾನ್ ಮಾಡುತ್ತಾರೆ.
ಇತ್ತ ವರಲಕ್ಷ್ಮಿ ತನ್ನ ಬಾವನ ಮಾತಿನಂತೆ ತಾನು ಮದುವೆಯಾಗಿ ಹೋಗೋ ಮನೆಯವರು ತನ್ನ ಐಎಎಸ್ ಕನಸಿಗೆ ಬೆಂಬಲ ನೀಡ್ತಾರೆ ಎಂದು ನಂಬಿ ಮದುವೆಗೆ ಒಪ್ಪಿಗೆ ಸೂಚಿಸುತ್ತಾಳೆ .ಆದರೆ ಸುಳ್ಳಿನ ಬುನಾದಿಯ ಮೇಲೆ ನಿಂತಿರುವ ವರು-ಸ್ಕಂದರ ಮದುವೆ ಯಾವುದೇ ವಿಘ್ನಗಳಿಲ್ಲದೆ ನಡಿಯುತ್ತಾ? ವರಲಕ್ಷ್ಮಿ ತನ್ನ ಐಎಎಸ್ ಕನಸನ್ನು ನನಸಾಗಿಸುತ್ತಾಳಾ ? ಈ ಮೂರುಗಂಟಿನ ಬಂಧ, ವರು ಕನಸುಗಳನ್ನು ಕಟ್ಟಿಹಾಕುತ್ತಾ? ಈ ಎಲ್ಲಾ ಪ್ರಶ್ನೆಗಳ ಉತ್ತರಕ್ಕೆ ತಪ್ಪದೇ ವೀಕ್ಷಿಸಿ ರೋಚಕ ಸಂಚಿಕೆಗಳನ್ನೊಳಗೊಂಡ ‘ಲಕ್ಷ್ಮಿ ಟಿಫನ್ ರೂಮ್’ ವರಲಕ್ಷ್ಮಿ ಕಲ್ಯಾಣ .. ಇದೇ ಸೋಮ-ಶನಿವಾರ ಸಂಜೆ 6.30 ಕ್ಕೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ.
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…