ಅಲೌಕಿಕ ಶಕ್ತಿಯಿಂದಾಗಿ ಶಿವನ ಸನ್ನಿಧಾನದಲ್ಲಿ ಕಥಾನಾಯಕಿ ‘ಪಂಚಮಿ’ ಜನಿಸಿರುತ್ತಾಳೆ. ವಿಚಿತ್ರ ರೀತಿಯಲ್ಲಿ ಜನ್ಮಪಡೆದ ಕಾರಣ ಊರಿನ ಜನ ಪಂಚಮಿಯನ್ನು ಅನಿಷ್ಟವೆಂದು ದೊಷಿಸುತ್ತಿದ್ದರೆ ಪಂಚಮಿ ನಾಗಕನ್ನಿಕೆಯಾಗಿ ಹೇಗೆ ಬದಲಾಗುತ್ತಾಳೆ ಎಂಬುದೇ ಕುತೂಹಲ. ಆಕೆಗೆ ತಿಳಿಯಲಾರದ ಶಕ್ತಿಯೊಂದು ಅವಳ ರೂಪದಲ್ಲಿ ಊರಿನ ಜನರಿಗೆ ಮಾಡುವ ಸಹಾಯ, ಪವಾಡಗಳು ನೋಡುಗರಿಗೆ ಮೈನವಿರೇಳಿಸುವಂತೆ ಮಾಡುತ್ತದೆ. ಇನ್ನು ಕಥಾನಾಯಕ ಮೋಕ್ಷ, ಈತನ ಕುಟುಂಬ ವಂಶ ಪಾರಂಪರೆಯಿಂದ ಅಲ್ಪಾಯುಷ್ಯರಾಗಿ ಮುಂದುವರಿಯುವಂತೆ ಶಾಪಗ್ರಸ್ತವಾಗಿರುತ್ತದೆ. ನಾಗದೇವತೆಯ ಆರಾಧನೆಯನ್ನು ಮಾಡಿಕೊಂಡು ಬಂದಿರುವ ಪಂಚಮಿ, ಮೋಕ್ಷನ ಕುಟುಂಬವನ್ನು ಹೇಗೆ ರಕ್ಷಿಸುತ್ತಾಳೆ ಎಂಬುದೇ ‘ನಾಗಪಂಚಮಿ’ ಧಾರಾವಾಹಿಯ ಕಥಾಹಂದರ.
‘ನಾಗಪಂಚಮಿ’ ಧಾರಾವಾಹಿಯು ಅದ್ಧೂರಿ ತಾರಾಬಳಗವನ್ನು ಹೊಂದಿದ್ದು. ಪೃಥ್ವಿ ಶೆಟ್ಟಿ, ದರ್ಶಿನಿ ಗೌಡ, ಚೈತ್ರ ಹಳ್ಳಿಕೆರೆ, ಸುನಿಲ್ ಪುರಾಣಿಕ್, ಪ್ರಿಯಾಂಕಾ ಶಿವಣ್ಣ, ಮೇಘನಾ ಖುಷಿ, ಪ್ರೀತಿ ಶ್ರೀನಿವಾಸ್ ಸೇರಿದಂತೆ ಇನ್ನು ಅನೇಕ ಕಲಾವಿದರು ಅಭಿನಯಿಸಿದ್ದಾರೆ.ಮಧ್ಯಾಹ್ನದ ಮನರಂಜನೆಯಲ್ಲಿ ಶುರುವಾಗ್ತಿದೆ ದ್ವೇಷ ಮರೆಸಿ, ಪ್ರೀತಿ ಹಂಚಲು ಜನ್ಮವೆತ್ತಿದ ನಾಗಕನ್ನಿಕೆಯ ಕಥೆ “ನಾಗಪಂಚಮಿ” ಇದೇ ಜುಲೈ 31 ರಿಂದ ಸೋಮವಾರದಿಂದ – ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ.
ವೀಕ್ಷಕರ ಗಮನಕ್ಕೆ, “ಬದಲಾದ ಸಮಯದಲ್ಲಿ” ಬರ್ತಿದೆ ಇಡೀ ದೇಶ ಗೆದ್ದ ಗೃಹಿಣಿಯ ಕಥೆ “ಅನುಪಮ” ಇದೇ ಸೋಮವಾರದಿಂದ ಬೆಳಗ್ಗೆ 11.30 ಕ್ಕೆ ಹಾಗು ರಾತ್ರಿ 10.30 ಕ್ಕೆ ತಪ್ಪದೇ ವೀಕ್ಷಿಸಿ.
ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
This website uses cookies.
Read More