ಉದಯ ಟಿವಿ

ನಿನ್ನಿಂದಲೇ – ಸೋಮವಾರದಿಂದ ಶನಿವಾರ ಮಧ್ಯಾಹ್ನ ೨.೩೦ಕ್ಕೆ – ಉದಯ ಟಿ.ವಿ

ಜಾಹೀರಾತುಗಳು
Ninnindale Serial Udaya TV
Ninnindale Serial Udaya TV

ಪ್ರಖ್ಯಾತ ನಟ , ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿದೆ ನಿನ್ನಿಂದಲೇ ಧಾರಾವಾಹಿ. ಇದೊಂದು ಪ್ರೇಮ ಕಥೆ. ಸುಮಧುರ ಸ್ನೇಹಕ್ಕೆ ಪ್ರೀತಿಯ ಕರೆಯೋಲೆ ಈ ನಿನ್ನಿಂದಲೇ. ಧ್ವನಿ ಕ್ರಿಯೇ಼ಷನ್ಸ್‌ ಲಾಂಚನದಲ್ಲಿ ಮೊದಲ ಬಾರಿಗೆ ನಿರ್ಮಾಣಕ್ಕೆ ಕೈ ಹಾಕುತಿರೋ ರಾಜೇಶ , ಈ ಪ್ರೇಮ ಕಥೆಯಲ್ಲಿ ಸಾಕಷ್ಟು ಕೌಟುಂಬಿಕ ಆಂಶಗಳನ್ನ ಸೇರಿಸಿದ್ದಾರೆ.

ರಾಜಲಕ್ಷ್ಮಿಯ ದೊಡ್ಡ ಕುಟುಂಬ , ಅಳಿಯನ ಮನೆಯವರ ಜೊತೆಗೆ ಆದ ಮನಸ್ತಾಪದಿಂದ , ಎರಡು ಕುಟುಂಬ ದೂರವಿರುತ್ತೆ . ಈ ಸಂಬಂದಗಳನ್ನ ಒಂದು ಮಾಡೋಕೆ ಇರೋ ದಾರಿ ತನ್ನ ಮೊಮ್ಮಕಳಾದ ಅನನ್ಯ ಮತ್ತು ವರು಼ಣ್‌ನ ಮದುವೆ. ನಾಯಕಿಯಾಗಿರೊ ಅನನ್ಯಾಳಿಗೆ ನಾಯಕ ವರುಣ್‌ ಅಂದ್ರೆ ಪಂಚಪ್ರಾಣ , ಈ ಪವಿತ್ರ ಸ್ನೇಹದಲ್ಲಿ ಪ್ರೀತಿಯ ಅಲೆ ಹೊಮ್ಮಲಿದೆಯಾ? ಎಂಬುದು ಈ ಧಾರಾವಾಹಿಯ ಸಾರಾಂಶ. ಶರತ್‌ ಪರ್ವತವಾಣಿಯವರ ಕಥೆಗೆ , ವಿನೋದ್‌ ಸಂಭಾಷಣೆ ಬರೆಯುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನ ದಿಲೀಪ್‌ ಹೊತ್ತಿದ್ದಾರೆ.

ಜಾಹೀರಾತುಗಳು

ನಾಯಕಿಯಾಗಿ ಚಿತ್ರಶ್ರಿ ಮತ್ತು ನಾಯಕನ ಪಾತ್ರದಲ್ಲಿ ದೀಪಕ್‌ ಬಣ್ಣ ಹಚ್ಚುತ್ತಿದ್ದಾರೆ., ಇವರ ಜೊತೆಗೆ ನಟಿ ಜಯಶ್ರಿ , ಲಲಿತಾಂಜಲಿ , ನಮಿತಾ ದೇಸಾಯಿ , ಪ್ರಶಾಂತ್‌ , ನಂದೀಶ , ಶೋಭಿತಾ ಮುಖ್ಯ ಪಾತ್ರಗಳನ್ನ ವಹಿಸಿದ್ದಾರೆ. ನಿನ್ನಿಂದಲೇ ಹಾಡಿಗೆ ಸಾಹಿತ್ಯ ಬರೆದಿರುವುದು ಸಾಹಿತಿ ಜಯಂತ್‌ ಕಾಯ್ಕಿಣಿ. ಸಂಗೀತ ಸಂಯೋಜನೆ ಮಾಡಿರಿವುದು ವಸಂತ್‌ ದನಿಯಾಗಿರೋದು ಮಾನಸ ಹೊಲ್ಲಾ. ನಿನ್ನಿಂದಲೇ ಇದೇ ೨೩ರಿಂದ ಸೊಮವಾರದಿಂದ ಶನಿವಾರ ಮದ್ಯಾಹ್ನ ೨.೩೦ಕ್ಕೆ ಉದಯಟಿವಿಯಲ್ಲಿ ಪ್ರಸಾರವಾಗಲಿದೆ.

Recent Posts

ಸುವರ್ಣ ಗೃಹಮಂತ್ರಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ

ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…

3 days ago

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

2 weeks ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

2 weeks ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

3 weeks ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

3 weeks ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

4 weeks ago