ಪ್ರಖ್ಯಾತ ನಟ , ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿದೆ ನಿನ್ನಿಂದಲೇ ಧಾರಾವಾಹಿ. ಇದೊಂದು ಪ್ರೇಮ ಕಥೆ. ಸುಮಧುರ ಸ್ನೇಹಕ್ಕೆ ಪ್ರೀತಿಯ ಕರೆಯೋಲೆ ಈ ನಿನ್ನಿಂದಲೇ. ಧ್ವನಿ ಕ್ರಿಯೇ಼ಷನ್ಸ್ ಲಾಂಚನದಲ್ಲಿ ಮೊದಲ ಬಾರಿಗೆ ನಿರ್ಮಾಣಕ್ಕೆ ಕೈ ಹಾಕುತಿರೋ ರಾಜೇಶ , ಈ ಪ್ರೇಮ ಕಥೆಯಲ್ಲಿ ಸಾಕಷ್ಟು ಕೌಟುಂಬಿಕ ಆಂಶಗಳನ್ನ ಸೇರಿಸಿದ್ದಾರೆ.
ರಾಜಲಕ್ಷ್ಮಿಯ ದೊಡ್ಡ ಕುಟುಂಬ , ಅಳಿಯನ ಮನೆಯವರ ಜೊತೆಗೆ ಆದ ಮನಸ್ತಾಪದಿಂದ , ಎರಡು ಕುಟುಂಬ ದೂರವಿರುತ್ತೆ . ಈ ಸಂಬಂದಗಳನ್ನ ಒಂದು ಮಾಡೋಕೆ ಇರೋ ದಾರಿ ತನ್ನ ಮೊಮ್ಮಕಳಾದ ಅನನ್ಯ ಮತ್ತು ವರು಼ಣ್ನ ಮದುವೆ. ನಾಯಕಿಯಾಗಿರೊ ಅನನ್ಯಾಳಿಗೆ ನಾಯಕ ವರುಣ್ ಅಂದ್ರೆ ಪಂಚಪ್ರಾಣ , ಈ ಪವಿತ್ರ ಸ್ನೇಹದಲ್ಲಿ ಪ್ರೀತಿಯ ಅಲೆ ಹೊಮ್ಮಲಿದೆಯಾ? ಎಂಬುದು ಈ ಧಾರಾವಾಹಿಯ ಸಾರಾಂಶ. ಶರತ್ ಪರ್ವತವಾಣಿಯವರ ಕಥೆಗೆ , ವಿನೋದ್ ಸಂಭಾಷಣೆ ಬರೆಯುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನ ದಿಲೀಪ್ ಹೊತ್ತಿದ್ದಾರೆ.
ನಾಯಕಿಯಾಗಿ ಚಿತ್ರಶ್ರಿ ಮತ್ತು ನಾಯಕನ ಪಾತ್ರದಲ್ಲಿ ದೀಪಕ್ ಬಣ್ಣ ಹಚ್ಚುತ್ತಿದ್ದಾರೆ., ಇವರ ಜೊತೆಗೆ ನಟಿ ಜಯಶ್ರಿ , ಲಲಿತಾಂಜಲಿ , ನಮಿತಾ ದೇಸಾಯಿ , ಪ್ರಶಾಂತ್ , ನಂದೀಶ , ಶೋಭಿತಾ ಮುಖ್ಯ ಪಾತ್ರಗಳನ್ನ ವಹಿಸಿದ್ದಾರೆ. ನಿನ್ನಿಂದಲೇ ಹಾಡಿಗೆ ಸಾಹಿತ್ಯ ಬರೆದಿರುವುದು ಸಾಹಿತಿ ಜಯಂತ್ ಕಾಯ್ಕಿಣಿ. ಸಂಗೀತ ಸಂಯೋಜನೆ ಮಾಡಿರಿವುದು ವಸಂತ್ ದನಿಯಾಗಿರೋದು ಮಾನಸ ಹೊಲ್ಲಾ. ನಿನ್ನಿಂದಲೇ ಇದೇ ೨೩ರಿಂದ ಸೊಮವಾರದಿಂದ ಶನಿವಾರ ಮದ್ಯಾಹ್ನ ೨.೩೦ಕ್ಕೆ ಉದಯಟಿವಿಯಲ್ಲಿ ಪ್ರಸಾರವಾಗಲಿದೆ.
ಕನ್ನಡ ಕಿರುತೆರೆಯಲ್ಲಿ ರಿಯಾಲಿಟಿ ಶೋ ಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ 'Huu ಅಂತೀಯಾ...Uhuu…
ಉದಯ ಟಿವಿ ಶೀಮದ್ ರಾಮಾಯಣ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…
ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
This website uses cookies.
Read More