ಉದಯ ಟಿವಿ

ಪ್ರೀತಿ ಅರಸಿ – ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಪ್ರೀತಿ ಅರಸಿ” ಅಕ್ಟೋಬರ್‌ 16 ರಿಂದ ಪ್ರತಿದಿನ ರಾತ್ರಿ 9 ಕ್ಕೆ

ಜಾಹೀರಾತುಗಳು

ಇದೇ ಅಕ್ಟೋಬರ್‌ 16 ರಿಂದ ವಾರದ ಎಲ್ಲಾ ದಿನಗಳಲ್ಲಿ ರಾತ್ರಿ 9 ಕ್ಕೆ ಉದಯ ಟಿವಿ ಯಲ್ಲಿ ಪ್ರಸಾರವಾಗಲಿದೆ – ಪ್ರೀತಿಯ ಅರಸಿ

Udaya TV Serial Preetiya Arasi
Udaya TV Serial Preetiya Arasi

ಕರ್ನಾಟಕದ ವೀಕ್ಷಕರ ಮನಗೆದ್ದ ಮೊದಲ ಚಾನಲ್‌ ಉದಯ ಟಿವಿ ೩ ದಶಕಗಳಿಂದ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಹಾಗೆ ಇತ್ತೀಚಿಗಷ್ಟೆ ವಿಶಿಷ್ಟ ರೀತಿಯ ಕಥೆಯೊಂದಿಗೆ ಪ್ರಾರಂಭವಾದ ಶಾಂಭವಿ ಈಗಾಗಲೆ ಜನಮನ್ನಣೆ ಪಡೆದುಕೊಂಡಿದೆ. ಕನ್ಯಾದಾನ,ಆನಂದರಾಗ,ಅಣ್ಣ-ತಂಗಿ,ಸೇವಂತಿ,ಜನನಿ,ರಾಧಿಕಾ,ಗೌರಿಪುರದ ಗಯ್ಯಾಳಿಗಳು ಹೊಸ ರೀತಿಯ ಕಥಾಹಂದರದೊಂದಿಗೆ ವೀಕ್ಷಕರ ಪ್ರೀತಿಗೆ ಪಾತ್ರಗಳಾಗಿವೆ. ಈಗ ಇದೇ ಸಾಲಿಗೆ ಆಕ್ಟೋಬರ್‌ ೧೬ರಿಂದ ಪ್ರತಿದಿನ ರಾತ್ರಿ ೯ಕ್ಕೆ “ಪ್ರೀತಿಯ ಅರಸಿ” ಎಂಬ ಹೊಸ ಧಾರಾವಾಹಿ ಉದಯಟಿವಿಯಲ್ಲಿ ಪ್ರಸಾರವಾಗಲಿದೆ.

ಅಪೂರ್ಣ ಮನಸ್ಸುಗಳ ಪರಿಪೂರ್ಣ ಪ್ರೇಮ ಕಥೆ ಪ್ರೀತಿಯ ಅರಸಿ. ಸಾಮಾನ್ಯವಾಗಿ ಗಂಡು ಎಂದರೆ ಹೊರ ಪ್ರಪಂಚದಲ್ಲಿ ದುಡಿಯುವುದು, ಹೆಣ್ಣು ಎಂದರೆ ಮನೆ ನಿಭಾಯಿಸುವ ಜವಾಬ್ದಾರಿ ಹೊತ್ತವಳು ಎನ್ನುವುದು ಲೋಕಾರೂಡಿ. ನಮ್ಮ ಕಥಾನಾಯಕಿ ಅಂಜಲಿ ಮತ್ತು ಕಥಾನಾಯಕ ರಾಕಿ, ಇವರಿಬ್ಬರೂ ಈ ಸಾಮಾನ್ಯ ಜಗತ್ತಿನಲ್ಲಿ ಅಸಾಮಾನ್ಯ ಯೋಚನಾಲಹರಿ ಹೊಂದಿರುವವರು. ತನ್ನ ಉದ್ಯೋಗದಲ್ಲಿ ಅತ್ತ್ಯುನತ ಮಟ್ಟಕ್ಕೇರುವುದು ಅಂಜಲಿಯ ಕನಸಾದರೆ, ಕುಟುಂಬವೇ ಸರ್ವಸ್ವ, ಮನೆಯೇ ಎಲ್ಲಕ್ಕಿಂತ ಮುಖ್ಯ ಅನ್ನೋದು ರಾಕಿಯ ಧೃಡ ನಿರ್ಧಾರ. ಪ್ರೀತಿಯನ್ನ ಅರಸುತ್ತಿರುವ ಅಂಜಲಿ, ರಾಕಿಯ ಪ್ರೀತಿಯ ಅರಸಿಯಾಗುವಳೇ? ಈ ಅಪೂರ್ಣ ಮನಸ್ಸುಗಳನ್ನು ಬೆಸೆಯುವ ಅಪರೂಪದ ಪ್ರೇಮ ಕಥೆ ಪ್ರೀತಿಯ ಅರಸಿ.

ಜಾಹೀರಾತುಗಳು

ಶೃತಿ ನಾಯ್ಡು ನಿರ್ಮಿಸಿ, ರಮೇಶ್‌ ಇಂದ್ರ ನಿರ್ದೇಶಿಸುತ್ತಿರುವ ಈ ಅಪರೂಪದ ಪ್ರೇಮ ಕಥೆಯಲ್ಲಿ ಅಂಜಲಿಯಾಗಿ ರಕ್ಷಾ ನಿಂಬರ್ಗಿ, ರಾಕಿಯಾಗಿ ಪೃಥ್ವಿ ಶೆಟ್ಟಿ ನಟಿಸುತ್ತಿದ್ದಾರೆ. ಈ ಇಬ್ಬರನ್ನು ಒಂದು ಮಾಡುವ ಜವಾಬ್ದಾರಿಯನ್ನ ಇವರ ಅಜ್ಜಿಯಂದಿರಾಗಿ ಗಿರಿಜಾ ಲೋಕೇಶ್‌ ಮತ್ತು ಪದ್ಮಾ ವಾಸಂತಿ ನಿಭಾಯಿಸಿದರೆ, ಅಪ್ಪನಾಗಿ ಜೈಜಗದಿಶ್‌ ಅಭಿನಯಿಸಿದ್ದಾರೆ. ಇವರೊಂದಿಗೆ ಮಿಥುನ್‌ ತೇಜಸ್ವಿ, ನಾಗೇಂದ್ರ ಅರಸ್‌ ಮತ್ತು ರಾಧಾ ಜೈರಾಮ್‌ ಮುಖ್ಯ ಭೂಮಿಕೆಯಲ್ಲಿದ್ದಾರೆ.

Recent Posts

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

1 day ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

5 days ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

1 week ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

1 week ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

3 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

4 weeks ago