ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ವಿನೂತನ ಧಾರಾವಾಹಿಗಳ ಮೂಲಕ ಮುಂಚೂಣಿಯಲ್ಲಿರುವ ಜೀ ಕನ್ನಡ ಈ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ವಿನೂತನವಾಗಿ ಆಚರಿಸುತ್ತಿದೆ. ಜೀ ಕನ್ನಡದಲ್ಲಿ ದಿಟ್ಟ ಹೆಣ್ಣುಮಗಳ ಪ್ರತಿನಿಧಿಯಾಗಿರುವ “ಸತ್ಯ” ನಿಜ ಜೀವನದ “ಸತ್ಯ”ರ ಪಾತ್ರಗಳೊಂದಿಗೆ ವಿನೂತನ ರೀತಿಯಲ್ಲಿ ಆಚರಿಸಲಿದ್ದಾರೆ. ಸಂಜೆ 5.30ಕ್ಕೆ ಧಾರಾವಾಹಿಯ ಸತ್ಯ ನಿಜ ಜೀವನದ ಸತ್ಯರನ್ನು ಸಂದರ್ಶಿಸುವ ಅಪರೂಪದ ಕಾರ್ಯಕ್ರಮ ನಡೆಯಲಿದೆ.
“ಸತ್ಯ” ಧಾರಾವಾಹಿ ಪ್ರಾರಂಭವಾದ ದಿನದಿಂದಲೂ ಮಹಿಳೆಯರನ್ನು ಅಪಾರವಾಗಿ ಸೆಳೆದಿದೆ. ಸತ್ಯ ಪಾತ್ರವು ಎಲ್ಲ ಮಹಿಳೆಯರಿಗೂ ಸ್ಫೂರ್ತಿ ತುಂಬಿದೆ. ಈಗ ನಿಜ ಜೀವನದ ಸತ್ಯ ಪಾತ್ರಧಾರಿಗಳಾದ ಮೈಸೂರಿನ ಆಟೊ ಚಾಲಕಿ ಸೌಮ್ಯಾ ರಾಣಿ, ಮಂಡ್ಯದಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುವ ಸುಮಲತಾ, ಬೆಂಗಳೂರಿನ ಗೋ ಪಿಂಕ್ ಕ್ಲಬ್ ನ ರೂಪಾ ಆಲಿಸಾ, ಬೆಂಗಳೂರಿನ ಸ್ವಿಗ್ಗಿ ಡೆಲಿವರಿ ಮಾಡುವ ಮೂಲಕ ಬದುಕು ಕಟ್ಟಿಕೊಂಡ ಉಮಾ ರೆಡ್ಡಿ ಅವರುಗಳು ಸತ್ಯ ಧಾರಾವಾಹಿಯ ಪಾತ್ರಗಳಂತೆಯೇ ಬದುಕಿದವರು. ಬದುಕಿನ ಸಂಕಷ್ಟಗಳನ್ನು ಎದುರಿಸಿ ದಿಟ್ಟವಾಗಿ ನಿಂತವರು.
ಈ ಎಲ್ಲರೂ ಧಾರಾವಾಹಿ ಪಾತ್ರಕ್ಕೆ ಸ್ಫೂರ್ತಿಯಾದವರು, ಒಟ್ಟಿಗೆ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಿದ್ದಾರೆ. ಸತ್ಯ ಜೀ ಕನ್ನಡದ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಒಂದು.
ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
This website uses cookies.
Read More