ಕನ್ನಡ ಕಿರುತೆರೆಯ ಇತಿಹಾಸದಲ್ಲಿ ‘ಸ್ಟಾರ್ ಸುವರ್ಣ’ವು ಹೊಸತನದ ಛಾಪನ್ನು ಮೂಡಿಸುತ್ತಲೇ ಬರುತ್ತಿದೆ. ಪ್ರಸ್ತುತ ನಾಡಿನ ನಾರಿಮಣಿಯರಿಗಾಗಿ ಮೂಡಿ ಬರುತ್ತಿರುವ “ಸುವರ್ಣ ಸೂಪರ್ ಸ್ಟಾರ್” ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ.
2020ರಲ್ಲಿ ಕರ್ನಾಟಕದ ಮಹಿಳೆಯರಿಗಾಗಿ, ಅವರಲ್ಲಿರುವ ಪ್ರತಿಭೆ, ಸಾಹಸ, ನಾವು ಯಾರಿಗೂ ಕಮ್ಮಿಯಿಲ್ಲ ಎಂಬ ಛಲ ಹಾಗು ನೊಂದವರಿಗಾಗಿ ಸ್ಫೂರ್ತಿ ನೀಡಲು ಸಜ್ಜಾದ ಮಹಾ ವೇಧಿಕೆ ‘ಸುವರ್ಣ ಸೂಪರ್ ಸ್ಟಾರ್’. ದಿನದಿಂದ ದಿನಕ್ಕೆ ನೋಡುಗರ ಮನಗೆದ್ದು 2ನೇ ಸೀಸನ್ ನೊಂದಿಗೆ ಮುನ್ನುಗ್ಗುತ್ತಿದೆ. ಈ ಮಹೋನ್ನತ ಕಾರ್ಯಕ್ರಮದ ನಿರೂಪಕಿ ಪ್ರೇಕ್ಷಕರ ನೆಚ್ಚಿನ ನಟಿ ಶಾಲಿನಿ. ಕರ್ನಾಟಕದ ಮೂಲೆ ಮೂಲೆಯಿಂದ ಬಂದ ಮಹಿಳೆಯರ ಜೊತೆ ತಾನು ಒಬ್ಬಳಂತಾಗಿ, ಅವರೊಂದಿಗೆ ಬೆರೆತು, ಬದುಕನ್ನು ಸಂಭ್ರಮಿಸುವುದರ ಜೊತೆ ಇಡೀ ಕರ್ನಾಟಕದ ಮನೆ ಮಂದಿಯ ಮನಸಿನಲ್ಲಿ ಜಾಗ ಪಡೆದು ಕೊಂಡಿದ್ದಾರೆ.
ಇನ್ನು ಕಾರ್ಯಕ್ರಮದ ಮತ್ತೊಂದು ಆಕರ್ಷಣೆ ಅಂದ್ರೆ ಪ್ರತಿ ದಿನವೂ ಶಾಲಿನಿ ಧರಿಸುವ ವಿಶಿಷ್ಟವಾಗಿ ವಿಭಿನ್ನವಾಗಿ ಡಿಸೈನ್ ಮಾಡಿದ ಬ್ಲೌಸ್ಗಳಿಗಂತನೇ ಒಂದಷ್ಟು ಅಭಿಮಾನಿ ವರ್ಗವಿದೆ. ಇಲ್ಲಿಯವರೆಗೆ 3 ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಸಾವಿರ ಸಂಚಿಕೆಗಳ ಸಂಭ್ರಮದ ಹಬ್ಬದಲ್ಲಿ ನಟಿಯರಾದ ಗಾನವಿ, ಮಾನ್ವಿತಾ ಕಾಮತ್ ಹಾಗು ಶ್ವೇತಾ ಶ್ರೀವಾಸ್ತವ್ ರವರು ಭಾಗಿಯಾಗಿದ್ದು ವೀಕ್ಷಕರಿಗಾಗಿ ಅದ್ಬುತ ಡಾನ್ಸ್ ಪರ್ಫಾರ್ಮೆನ್ಸ್ ನೀಡಲಿದ್ದಾರೆ.
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
This website uses cookies.
Read More