ಸ್ಟಾರ್ ಸುವರ್ಣ

ಸ್ಟಾರ್ ಸುವರ್ಣದ ಹೊಸತನಕ್ಕೆ ಸಾಕ್ಷಿಯಾದ “ಸುವರ್ಣ ಯುಗಾದಿ ಶುಭಾರಂಭ” || ಮಾರ್ಚ್ 19 ರಂದು ಸಂಜೆ 6 ಗಂಟೆಗೆ..!

ಜಾಹೀರಾತುಗಳು
Suvarna Ugadi Shubharambha
Suvarna Ugadi Shubharambha

ಸುವರ್ಣ ವಾಹಿನಿಯು ಕನ್ನಡಿಗರಿಗೆ ಹಿಂದಿನಿಂದಲೂ ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ನಮ್ಮ ಲಚ್ಚಿ, ಕಥೆಯೊಂದು ಶುರುವಾಗಿದೆ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆ ಮನೆಯ ಮಾತಾಗಿದೆ. ಈ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲು ಸ್ಟಾರ್ ಸುವರ್ಣ ವಾಹಿನಿಯು “ಸುವರ್ಣ ಯುಗಾದಿ ಶುಭಾರಂಭ” ಎಂಬ ಕಾರ್ಯಕ್ರಮವನ್ನು ನಡೆಸಿದೆ.

ಯುಗಾದಿ ಹಬ್ಬವನ್ನು ಹೊಸತನದಿಂದ ಬರಮಾಡಿಕೊಳ್ಳಲು ಸ್ಟಾರ್ ಸುವರ್ಣ ವಾಹಿನಿಯು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಬೇವು ಬೆಲ್ಲದ ರುಚಿಯನ್ನು ಸವಿಯಲು ಕನ್ನಡ ಬೆಳ್ಳಿತೆರೆಯ ಕಲಾವಿದರ ಜೊತೆ ಸುವರ್ಣ ಪರಿವಾರದ ನಕ್ಷತ್ರಗಳು ಪಾಲ್ಗೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಆಗಮಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದಾರೆ. ನಟ ಡಾಲಿ ಧನಂಜಯ್ ಅವರ ರಗಡ್ ಡೈಲಾಗ್ ಗೆ ಕುಪ್ಪಳಿಸಿದ ಸುವರ್ಣ ಸ್ಟಾರ್ಸ್. ಗೋಲ್ಡನ್ ಕ್ವೀನ್ ಅಮೂಲ್ಯ ದಂಪತಿಗಳು ಈ ಯುಗಾದಿಯನ್ನು ಸ್ಟಾರ್ ಸುವರ್ಣದ ಜೊತೆ ಸಂಭ್ರಮಿಸಿದ್ದು ಖುಷಿ ತಂದಿದೆ. ಜೊತೆಗೆ ಕಾಂತಾರದ ಸಪ್ತಮಿ ಗೌಡ, ಸಾನಿಯಾ ಅಯ್ಯರ್, ವಾಸುಕಿ ವೈಭವ್ ಸೇರಿದಂತೆ ಇನ್ನಷ್ಟು ಕಲಾವಿದರು ಮನರಂಜನೆಯ ಹೂರಣವನ್ನು ನೀಡಿದ್ದಾರೆ. ‘ಹೊಂಗನಸು’ ಧಾರಾವಾಹಿ ಖ್ಯಾತಿಯ ಮುಕೇಶ್ ಗೌಡ ಆಗಮಿಸಿದ್ದು ಇದೇ ಮೊದಲ ಬಾರಿಗೆ ಡಬ್ಬಿಂಗ್ ಧಾರಾವಾಹಿಯ ಕಲಾವಿದರನ್ನು ಕಾರ್ಯಕ್ರಮದಲ್ಲಿ ಕಾಣಬಹುದು.

ಜಾಹೀರಾತುಗಳು

ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ಈ ಯುಗಾದಿಯಿಂದ ಹೊಸತನದ ಕಾರ್ಯಕ್ರಮಗಳ ಜೊತೆ, ಹೊಸ ಹುಮ್ಮಸ್ಸಿನಲ್ಲಿ ಇನ್ನಷ್ಟು ವರ್ಣಮಯಗೊಂಡು ನಿಮ್ಮ ಮುಂದೆ ಬರಲಿದೆ. ತಪ್ಪದೇ ವೀಕ್ಷಿಸಿ “ಸುವರ್ಣ ಯುಗಾದಿ ಶುಭಾರಂಭ” ಮಾರ್ಚ್ 19 ರಂದು ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಹೊಸತನಕ್ಕೆ ಇನ್ನೊಂದು ಹೆಸರು “ಸ್ಟಾರ್ ಸುವರ್ಣ”.

Suvarna Ugadi Event

Recent Posts

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

15 hours ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

5 days ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

1 week ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

1 week ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

3 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

4 weeks ago