ಉದಯ ವಾಹಿನಿಯ ೨೭ ವರ್ಷಗಳ ಸತತ ಮನರಂಜನೆಯ ಭಿನ್ನ ಪ್ರಯತ್ನಕ್ಕೆ ಹೊಸದೊಂದು ಧಾರಾವಾಹಿ ಸೇರಲಿದೆ. ಯಾರಿವಳು, ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು, ನಯನತಾರ, ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸದಂತಹ ಹಲವಾರು ವಿಭಿನ್ನ ಕೂತೂಹಲಕಾರಿ ಕಥೆಗಳನ್ನು ನೀಡಿದ ಉದಯ ವಾಹಿನಿಯ ಹೆಗ್ಗಳಿಕೆ ಹೆಚ್ಚಿಸಲು ಒಡಹುಟ್ಟಿದವರ ಕತೆಯನ್ನು ಹೇಳಲು “ಅಣ್ಣ-ತಂಗಿ” ಎಂಬ ಹೆಸರಿನ ಹೊಚ್ಚ ಹೊಸ ಧಾರಾವಾಹಿಯು ವೀಕ್ಷಕರ ಮನೆ ಬಾಗಿಲಿಗೆ ಬರಲಿದೆ. ʼಅಣ್ಣ-ತಂಗಿʼ ಬೆಳ್ಳಿತೆರೆಯಷ್ಟೇ ಅತ್ಯುತ್ತಮ ಗುಣಮಟ್ಟದ ಕಥೆ, ಚಿತ್ರಕಥೆ, ಮೇಕಿಂಗ್ ಹಾಗೂ ತಾರಾಬಳಗವನ್ನು ಕಥೆ ಒಳಗೊಂಡಿದೆ.
ತುಳಸಿ ಮತ್ತು ಶಿವರಾಜು ಆದರ್ಶ ಅಣ್ಣ ತಂಗಿ, ಅಪ್ಪ ಅಮ್ಮ ಇಲ್ಲದಿರುವ ಇವರಿಬ್ಬರಿಗೂ ಇವರಿಬ್ಬರೆ ಆಸರೆ. ತುಳಸಿಗೆ ಹೆತ್ತವರ ಸ್ಥಾನದಲ್ಲಿರುವ ಶಿವಣ್ಣ ಕೂಡು ಕುಟುಂಬದ ಪ್ರೀತಿ ಸಿಗದೆ ಬೆಳೆದ ತಂಗಿಯನ್ನು ಎಲ್ಲ ಬಂಧುಗಳು ತುಂಬಿ ತುಳುಕುತ್ತಿರುವ ಒಂದು ದೊಡ್ಡ ಕುಟುಂಬಕ್ಕೆ ಮದುವೆ ಮಾಡಿಸಲು ಪ್ರಯತ್ನಿಸುತ್ತಾನೆ. ಆದರೆ ತಂಗಿಯ ಜಾತಕದ ಪ್ರಕಾರ ಭವಿಷ್ಯದಲ್ಲಿ ಅವಳಿಗೆ ಮದುವೆಯಾದರೆ ತನ್ನ ಊಸಿರಿನಂತಿರುವ ಅಣ್ಣನ ಸಂಬಂಧವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎನ್ನುವ ಸತ್ಯ ಗೊತ್ತಾಗುತ್ತದೆ. ಅಣ್ಣನನ್ನು ಒಂಟಿ ಮಾಡಿ ಬಿಟ್ಟು ಹೋಗಲು ತಂಗಿಗೆ ಮನಸಿಲ್ಲ. ಚಿಕ್ಕ ವಯಸ್ಸಿನಿಂದ ಒಗ್ಗಟ್ಟಿನಿಂದ ಬೆಳೆದು ಬಂದ ಇವರಿಬ್ಬರ ಬಂಧನ ತುಳಸಿಗೆ ಬರುವ ಗಂಡಿನ ಕಡೆಯವರಿಂದ ಅಥವಾ ಅತ್ತಿಗೆಯ ಕುಟುಂಬದಿಂದ ಮುರಿದು ಬೀಳುತ್ತಾ ಅನ್ನೋದೆ “ಅಣ್ಣ ತಂಗಿ”ಯ ಮೂಲ ಕಥೆ.
ಧಾರವಾಹಿಯ ನಿರ್ಮಾಣದ ಹೊಣೆಯನ್ನು ಚೈತನ್ಯ ಹರಿದಾಸ್ ಸಿನಿಮಾಸ್ ಹೊತ್ತಿದೆ. “ಆಕೃತಿ” ಯಂತಹ ಥ್ರಿಲ್ಲರ ಧಾರಾವಾಹಿಯನ್ನು ಕೊಟ್ಟ ಕನ್ನಡದ ಖ್ಯಾತ ನಿರ್ದೇಶಕರಾದ ಕೆ.ಎಮ್. ಚೈತನ್ಯ ಮತ್ತು ಹರಿದಾಸ್ ಕೆ.ಜಿ.ಎಫ್ ರವರು ನಿರ್ಮಿಸುತ್ತಿದ್ದಾರೆ. ನಿರ್ದೇಶನ ಮತ್ತು ಛಾಯಗ್ರಾಹÀಣ ಎಮ್. ಕುಮಾರ್. ರಾಘವ ದ್ವಾರ್ಕಿಯವರ ಚಿತ್ರಕತೆ, ತುರುವೆಕರೆ ಪ್ರಸಾದ್ – ಸಂಭಾಷಣೆ, ಸಂಕಲನ ಗುರುರಾಜ್ ಬಿ.ಕೆ ಅವರು ಕಾರ್ಯ ನೀರ್ವಹಿಸುತ್ತಿದ್ದಾರೆ.
ತಂಗಿ ತುಳಸಿ ಪಾತ್ರವನ್ನು ಅಖಿಲಾ ಪ್ರಕಾಶ್ ಹಾಗು ಅಣ್ಣನ ಪಾತ್ರವನ್ನು ಮಧು ಸಾಗರ್, ನಿರ್ವಹಿಸುತ್ತಿದ್ದಾರೆ. ಮಾನಸ ಜೋಷಿ, ರಾಜೇಶ್ ದೃವ, ಸ್ವರಾಜ್, ರೋಹಿತ್ನಾಗೇಶ್, ಶರ್ಮಿತಾ, ಹಿರಿಯ ಕಲಾವಿದರಾದ ರಾಧಾ ರಾಮಚಂದ್ರ, ಗಿರಿಶ್ ಜತ್ತಿ, ತನುಜಾ ರಂತ ಹಲವಾರು ತಾರೆಯರ ಗುಂಪು ಒಳಗೊಂಡ ಈ ಧಾರವಾಹಿ ನವೆಂಬರ್ ೨೨ ರಿಂದ ಸೋಮವಾರದಿಂದ ಶನಿವಾರದ ವೆರಗೆ ಸಂಜೆ ೭ ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
This website uses cookies.
Read More