ಇತ್ತೀಚಿನ ದಿನಗಳಲ್ಲಿ ಕಿರುತೆರೆಯಲ್ಲಿ ಬ್ಯಾಕ್ ಟು ಬ್ಯಾಕ್ ಅನೇಕ ಸೂಪರ್ ಹಿಟ್ ಸಿನಿಮಾಗಳು ಪ್ರಸಾರವಾಗುತ್ತಿದೆ. ಇದೀಗ ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣವು “ವೀರಸಿಂಹಾರೆಡ್ಡಿ” ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ.
‘ಗಾಡ್ ಆಫ್ ಮಾಸ್’ ಎಂದು ಕರೆಸಿಕೊಳ್ಳುವ ತೆಲುಗು ನಟ ನಂದಮೂರಿ ಬಾಲಕೃಷ್ಣ ಅಭಿನಯದ ʼವೀರಸಿಂಹಾರೆಡ್ಡಿʼ ಸಿನಿಮಾವು ಥಿಯೇಟರ್ ನಲ್ಲಿ ಹೊಸ ಛಾಪನ್ನೇ ಮೂಡಿಸಿತ್ತು. ಬಾಲಕೃಷ್ಣ ಅವರ ಜಬರ್ದಸ್ತ್ ಮಾಸ್ ಎಂಟ್ರಿಗೆ ಅಭಿಮಾನಿಗಳು ಮಸ್ತ್ ಎಂಜಾಯ್ ಮಾಡಿದ್ದರು.
ಇನ್ನು ಈ ಚಿತ್ರದ ಮತ್ತೊಂದು ವಿಶೇಷತೆ ಅಂದ್ರೆ ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ನೆಗೆಟಿವ್ ಶೇಡ್ ನಲ್ಲಿ ಕಾಣಿಸಿಕೊಂಡಿರುವುದು, ವಿಲನ್ ಲುಕ್ ನಲ್ಲಿ ದುನಿಯಾ ವಿಜಯ್ ಧೂಳೆಬ್ಬಿಸಿದಷ್ಟೇ ಅಲ್ಲದೆ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರುತಿ ಹಾಸನ್ ನಾಯಕಿಯಾಗಿ ಅಭಿನಯಿಸಿರುವ ಈ ಸಿನಿಮಾವು ಅದ್ಬುತ ತಾರಾಬಳಗವನ್ನು ಹೊಂದಿದೆ.
ಬಾಲಕೃಷ್ಣರವರು ದ್ವಿಪಾತ್ರದಲ್ಲಿ ಅಭಿನಯಿಸಿರುವ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ “ವೀರಸಿಂಹಾರೆಡ್ಡಿ” ಇದೇ ಏಪ್ರಿಲ್ 30 ರಂದು ಸಂಜೆ 6 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…