ಕನ್ನಡದ ನಂಬರ್ ಒನ್ ವಾಹಿನಿ ಜೀ ಕನ್ನಡಕ್ಕೆ ಹದಿನೈದು ವರ್ಷ ತುಂಬಿದ ಸಂಭ್ರಮದ ಸಲುವಾಗಿ , ಮನರಂಜನೆಯ ಸರಮಾಲೆಯನ್ನೇ ವೀಕ್ಷಕರಿಗೆ ನೀಡಲು ವಿಶೇಷ ಕಾರ್ಯಕ್ರಮ “ಜೀ ಕನ್ನಡ 15ನೇ ವರ್ಷದ ಮಹೋತ್ಸವ” ಎಂಬ ಅದ್ದೂರಿ ಕಾರ್ಯಕ್ರಮ ಪ್ರಸಾರ ಮಾಡಲು ಸಜ್ಜಾಗಿದೆ. ಇದೇ ಸಂದರ್ಭದಲ್ಲಿ ವಾಹಿನಿಯ ಎಲ್ಲಾ ಧಾರಾವಾಹಿಗಳನ್ನ ಸಂಭ್ರಮಿಸುವುದರ ಜೊತೆಗೆ ತೆರೆಯ ಹಿಂದೆ ದುಡಿಯೋ ಶ್ರಮಜೀವಿಗಳನ್ನು ಗುರುತಿಸಿ ಗೌರವಿಸುವ ಇಂಗಿತ ವಾಹಿನಿಯದ್ದು.ಇದರ ಜೊತೆಗೆ ವಾಹಿನಿಯಲ್ಲಿ ಮೂಡಿಬಂದ ಹಲವು ರಿಯಾಲಿಟಿ ಶೋ ಗಳ ಕಲಾವಿದರು ಕೂಡ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ.
ಹಾಗೇ ಚಿತ್ರರಂಗದಲ್ಲಿ ಅಪಾರ ಅನುಭವ ಇರುವ ಸಾಧಕರನ್ನು ಕೂಡ ಇಲ್ಲಿ ಗೌರವಿಸಲಾಗುವುದು. ಜೀ ಕನ್ನಡದ ವೇದಿಕೆಯಲ್ಲಿ ಗುರುತಿಸಿಕೊಂಡ ಗಾಯಕರು, ಬಾಲ ನಟರು, ನಾಯಕ ನಟ – ನಟಿಯರು, ಹಿರಿಯ ಕಲಾವಿದರು, ನಿರ್ದೇಶಕರು, ನೃತ್ಯ ನಿರ್ದೇಶಕರು ಇಂದು ಹಲವಾರು ಸಿನಿಮಾಗಳಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸುತ್ತಿದ್ದಾರೆ.ಅವರೆಲ್ಲರೂ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳುತ್ತಿದ್ದಾರೆ.ಸಮಾಜ ಸೇವೆಗಳನ್ನ ತಮ್ಮದೇ ಆದ ರೀತಿಯಲ್ಲಿ ನಿಸ್ವಾರ್ಥ ಮನೋಭಾವದಿಂದ ಮಾಡುತ್ತಿರುವವರನ್ನೂ ಕೂಡ ಸಾಧಕರೆಂದು ಪರಿಗಣಿಸಿ ಗೌರವಿಸಲಾಗುತ್ತಿದೆ.
ಜೀ ಕನ್ನಡ ವಾಹಿನಿಯಲ್ಲಿ ಈ ಮೊದಲು ಪ್ರಸಾರವಾದಂತಹ ಧಾರಾವಾಹಿಗಳ ಕಲಾವಿದರು ಕೂಡ ತಮ್ಮ ಹಳೆಯ ನೆನಪುಗಳನ್ನು ಇಲ್ಲಿ ಹಂಚಿಕೊಳ್ತಾರೆ. ಈ ಮೊದಲು ಪ್ರಸಾರ ವಾದ ರಿಯಾಲಿಟಿ ಶೋಗಳ ನಿರೂಪಕರು ಕೂಡ ಈ ಸಂಭ್ರಮದಲ್ಲಿ ಪಾಲ್ಗೋಳ್ಳುತ್ತಾರೆ. ಇದರ ಜೊತೆ ವಿಶೇಷವಾಗಿ ಸಾವಿರಕ್ಕೂ ಹೆಚ್ಚು ಎಪಿಸೋಡ್ ಗಳನ್ನ ಕಂಡ ಧಾರಾವಾಹಿ ತಂಡವನ್ನು ಗೌರವಿಸಲಾಗುವುದು, ಮತ್ತು ವಾಹಿನಿಯ ಹೊಸ ಕಾರ್ಯಕ್ರಮಗಳನ್ನು ಇಲ್ಲಿ ಪರಿಚಯಿಸಲಾಗುವುದು. ಇದೇ ಕಾರ್ಯಕ್ರಮದಲ್ಲಿ ಮನರಂಜನೆಗೆ ಮತ್ತಷ್ಟು ಮೆರಗು ನೀಡಲು ಕನ್ನಡ ಚಿತ್ರರಂಗದ ಹೆಸರಾಂತ ನಟ ನಟಿಯರು ಪಾಲ್ಗೊಳ್ಳುತ್ತಾರೆ ಎಂದು ಜೀ ಕನ್ನಡದ ಬಿಜಿನೆಸ್ ಹೆಡ್ ರಾಘವೇಂದ್ರ ಹುಣಸೂರು ತಿಳಿಸಿದ್ದಾರೆ.
ಜೀ ಕನ್ನಡದ ಹದಿನೈದು ವರ್ಷದ ಸಂಭ್ರಮದ ಆಚರಣೆಯಾದ “ಜೀ ಕನ್ನಡ 15 ನೇ ಮಹೋತ್ಸವ” ಸತತ ಐದು ವಾರಗಳು ಇದೇ ಶನಿವಾರ ಮತ್ತು ಭಾನುವಾರದಿಂದ ರಾತ್ರಿ 9 ರಿಂದ ಪ್ರಸಾರವಾಗಲಿದೆ.,
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…