ಜೀ ಕನ್ನಡ ಚಾನೆಲ್

ಜೀ಼ ಕನ್ನಡದಲ್ಲಿ ಯುಗಾದಿ ಪ್ರಯುಕ್ತ “ಜೀ಼ ಕುಟುಂಬ ಉತ್ಸವ” ಮಹಾಪ್ರೋಮೋ ಬಿಡುಗಡೆ. ಜೀ಼ ಶಕ್ತಿಯರಿಗೆ ಸನ್ಮಾನ

ಜಾಹೀರಾತುಗಳು
Zee Kutumba Utsava
Zee Kutumba Utsava

ಕನ್ನಡದ ಅತ್ಯಂತ ಜನಪ್ರಿಯ ವಾಹಿನಿ ಜೀ಼ ಕನ್ನಡ, ಯುಗಾದಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು ನೀಡಲು ವಿಶೇಷ ಕಾರ್ಯಕ್ರಮ “ಜೀ಼ ಕುಟುಂಬ ಉತ್ಸವ” ವನ್ನು ಪ್ರಸಾರ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಜೀ಼ ಕನ್ನಡ ವಾಹಿನಿಯ ಎಲ್ಲಾ ಧಾರಾವಾಹಿಗಳ ಕಲಾವಿದರು ತಮ್ಮ ಮಾತು, ಹಾಸ್ಯ, ನೃತ್ಯ, ಮತ್ತು ಆಟಗಳ ಮೂಲಕ ವೀಕ್ಷಕರಿಗೆ ಮನರಂಜನೆಯನ್ನು ಉಣಬಡಿಸಲಿದ್ದಾರೆ. ವಿಭಿನ್ನ, ವಿನೂತನ, ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಜೀ಼ ಕನ್ನಡ ವಾಹಿನಿ, ಈ ಜೀ಼ ಕುಟುಂಬ ಉತ್ಸವದಲ್ಲೂ ಹಲವು ವಿಶೇಷತೆಗಳನ್ನ ಮೆರೆದಿದೆ.

ಕನ್ನಡ ಕಿರುತೆರೆಯಲ್ಲೇ ಮೊಟ್ಟ ಮೊದಲ ಬಾರಿಗೆ ಒಂದು ಸಾಹಸಕ್ಕೆ ಕೈ ಹಾಕಿದೆ ಅದೇ ಮಹಾಪ್ರೋಮೋ ಪ್ರಸಾರ. ಮಹಾಪ್ರೋಮೋ – ಸಾಮಾನ್ಯವಾಗಿ ಧಾರಾವಾಹಿಗಳ ಕತೆಯಲ್ಲಿ ನಾಳೆ ಏನಾಗಬಹುದು ಎಂದು, ಹಿಂದಿನ ದಿನದ ಪ್ರೋಮೋಗಳ ಮೂಲಕ ನೋಡತ್ತಿದ್ದ ವೀಕ್ಷಕರಿಗೆ, ಕತೆಯಲ್ಲಿ ಒಂದು ತಿಂಗಳು ಅಥವಾ ಅದಕ್ಕೂ ಮುಂದೆ, ಕತೆಯ ತಿರುವು ಯಾವ ದಿಕ್ಕಿಗೆ ಸಾಗುತ್ತದೆ ಎಂಬ ವೀಕ್ಷಕರ ಕೂತೂಹಲಕ್ಕೆ ಉತ್ತರ ನೀಡುವ ಪ್ರೋಮೋನೇ ಈ ಮಹಾ ಪ್ರೋಮೋ. ಈ ಧೈರ್ಯ, ಪ್ರಯತ್ನ ಕನ್ನಡ ಕಿರುತೆರೆಯಲ್ಲಿ ಮೊದಲು.ಇದರ ಜೊತೆಗೆ 35 ವರ್ಷಕ್ಕೂ ಹೆಚ್ಚು ಕಾಲ ಚಂದನವನದಲ್ಲಿ ಸೇವೆ ಸಲ್ಲಿಸಿ, ಹಲವು ನಟ ನಟಿಯರಿಗೆ ಸ್ಪೂರ್ತಿಯಾಗಿ, ಈಗ ಜೀ಼ ಕನ್ನಡದ ಧಾರಾವಾಹಿಗಳಲ್ಲೂ ಮಿಂಚುತ್ತಿರುವ ಹಿರಿಯ ನಟಿಯರಾದ

ಜಾಹೀರಾತುಗಳು

ಪದ್ಮಾ ವಾಸಂತಿ, ಸುಧಾರಾಣಿ, ವಿನಯಾ ಪ್ರಸಾದ್, ವಿಜಯಲಕ್ಷ್ಮೀ ಸಿಂಗ್ ಮತ್ತು ಈಗ ಹೊಸದಾಗಿ ಜೀ಼ ಕುಟುಂಬಕ್ಕೆ ಸೇರ್ಪಡೆಯಾಗುತ್ತಿರುವ ಉಮಾಶ್ರೀ ಅವರನ್ನ “ಜೀ಼ ಶಕ್ತಿ” ಎಂದು ಪರಿಗಣಿಸಿ ಗೌರವಿಸಿದ್ದಾರೆ.ಅಷ್ಟೇ ಅಲ್ಲದೇ, ಜೀ಼ ಕುಟುಂಬಕ್ಕೆ ಹೊಸದಾಗಿ ಸೇರ್ಪಡೆಯಾಗುತ್ತಿರುವ ʼಹಿಟ್ಲರ್‌ ಕಲ್ಯಾಣʼ ಹಾಗು ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿಯ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಧಾರಾವಾಹಿಯ ಮಾಹಿತಿಯನ್ನು ನೀಡುತ್ತಾರೆ. ಈ ಎಲ್ಲಾ ಭರಪೂರ ಮನರಂಜನೆ ಇದೇ ಶನಿವಾರ ಮತ್ತು ಭಾನುವಾರ ಸಂಜೆ 7.30 ರಿಂದ 10.30 ರ ವರೆಗೆ ಜೀ಼ ಕನ್ನಡದಲ್ಲಿ ಪ್ರಸಾರವಾಗಲಿದೆ.

Recent Posts

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

12 hours ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

4 days ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

1 week ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

1 week ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

3 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

4 weeks ago